ರಾಜ ಮನೆತನವದವರಿಗೆ ಸಾಂಪ್ರಾದಾಯಿಕ ಆಹ್ವಾನ ನೀಡಿದ ಜಿಲ್ಲಾಡಳಿತ 
ರಾಜ್ಯ

ಮೈಸೂರು ದಸರಾ: ರಾಜಮನೆತನದವರಿಗೆ ಸಾಂಪ್ರಾದಾಯಿಕ ಆಹ್ವಾನ ನೀಡಿದ ಜಿಲ್ಲಾಡಳಿತ

ವಿಶ್ವವಿಖ್ಯಾತ ಮೈಸೂರು ದಸರಾಗೆ ಫಲ ತಾಂಬೂಲ ನೀಡುವ ಮೂಲಕ ರಾಜಮನೆತನದವರಿಗೆ ಸಾಂಪ್ರದಾಯಕವಾಗಿ ಜಿಲ್ಲಾಡಳಿತ ಆಹ್ವಾನ ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಫಲ ತಾಂಬೂಲ ನೀಡುವ ಮೂಲಕ ರಾಜಮನೆತನದವರಿಗೆ ಸಾಂಪ್ರದಾಯಕವಾಗಿ ಜಿಲ್ಲಾಡಳಿತ ಆಹ್ವಾನ ನೀಡಿತು.

ಪ್ರತಿ ವರ್ಷದಂತೆ ನಾಡಹಬ್ಬ ದಸರಾಗೆ ರಾಜಮನೆತನದವರನ್ನು ತಾಂಬೂಲ ಹಾಗೂ ಗೌರವಧನ ನೀಡಿ ಆಹ್ವಾನ ನೀಡುವುದು ಸಂಪ್ರದಾಯ. ಅದರಂತೆ ಈ ವರ್ಷ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದ ವತಿಯಿಂದ 36 ಲಕ್ಷ ಚೆಕ್‍ನ ಗೌರವ ರಾಜಧನ ನೀಡುವ ಮೂಲಕ ಜಂಬೂ ಸವಾರಿಗೆ ಸಹಕಾರಿ ನೀಡಿ, ಅಂಬಾರಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು.

ಸಹಕಾರ ಸಚಿವ ಹೆಚ್.ಎಸ್ ಮಹದೇವಪ್ರಸಾದ್, ಎಚ್.ಸಿ ಮಹಾದೇವಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್ ಸೇರಿದಂತೆ ಇತರರು ಪ್ರಮೋದಾದೇವಿ ಒಡೆಯರ್ ಮತ್ತು ಯದೂವೀರ್ ಅವರನ್ನು ದಸರಾಗೆ ಸಾಂಪ್ರದಾಯಕವಾಗಿ ಆಹ್ವಾನಿಸಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ನೀಡಿದ ರಾಣಿ ಪ್ರಮೋದಾದೇವಿ ಒಡೆಯರ್, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಸಹಕಾರ ಇರುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಭರವಸೆ ನೀಡಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುವಂತೆ ಪ್ರಾರ್ಥಿಸಿದ ಅವರು, ಎರಡು ರಾಜ್ಯಗಳು ಸಮಸ್ಯೆಯನ್ನು ಸೌಹಾರ್ದಯುತವಾಗಿ  ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!