ಸುಭಾಷ್ ಚಂದ್ರ ಕುಂಟಿಯಾ ಮತ್ತು ಸಿಎಂ ಸಿದ್ದರಾಮಯ್ಯ 
ರಾಜ್ಯ

ಸುಭಾಷ್ ಚಂದ್ರ ಕುಂಟಿಯಾ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ನೇಮಕ

ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. 1981ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಕುಂಟಿಯಾ ಅವರು ಸೆ.30ಕ್ಕೆ ನಿವೃತ್ತರಾಗಲಿರುವ ಹಾಲಿ ಸಿಎಸ್ ಅರವಿಂದ್ ಜಾಧವ್ ಅವರ ಜಾಗಕ್ಕೆ ಬರಲಿದ್ದಾರೆ. ಹೀಗಾಗಿ ಸುಭಾಷ್ ಚಂದ್ರ ಅವರು ಅಕ್ಟೋಬರ್ 1 ರಿಂದ ಮುಖ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಮತ್ತೊಬ್ಬ ಐಎಎಸ್ ಅಧಿಕಾರಿ ರತ್ನಪ್ರಭಾ ಹಾಗೂ ಕುಂಟಿಯಾ ಹಾಗೂ ಎಸ್ ಪಟ್ನಾಯಕ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ರತ್ನ ಪ್ರಭ ಮತ್ತು ಸುಭಾಷ ಚಂದ್ರ 1981 ನೇ ಬ್ಯಾಚ್ ನವರಾಗಿದ್ದು, ಪಟ್ನಾಯಕ್ ಅವರಿಗಿಂತ ಕಿರಿಯರು. ಹೀಗಾಗಿ ಸೇವಾವಧಿ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಕುಂಟಿಯಾ ಅವರನ್ನೇ ನೂತನ ಮುಖ್ಯಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾ ನೂತನ DCM ಸುನೇತ್ರಾ ಪವಾರ್‌ಗೆ ಕಂದಾಯ ಸೇರಿ ಮೂರು ಖಾತೆ ಹಂಚಿಕೆ; ಕೈತಪ್ಪಿದ ಹಣಕಾಸು

ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ Australian Open ಕಿರೀಟ

'ಮನ ಮೆಚ್ಚಿದ ಅಪ್ಪ': ಮಗನ ಜೀವ ಉಳಿಸಲು ಜೀವನ್ಮರಣ ಹೋರಾಟ, ಚಿರತೆಯನ್ನು ಬಡಿದು ಕೊಂದ ತಂದೆ

"ನಾವು ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ": ಪಾಕ್ ಪ್ರಧಾನಿ

'ಅಮ್ಮನ ಜೊತೆ ಮಾತಾಡಬೇಕು ಎಂದಿದ್ದರು': ಉದ್ಯಮಿ ಸಿಜೆ ರಾಯ್ ಅಂತಿಮ ಕ್ಷಣದ ಕುರಿತು MD ಮಾತು!

SCROLL FOR NEXT