ವಿದ್ಯಾರ್ಥಿಯ ಕೈ ಕಚ್ಚಿದ ಕಂಡಕ್ಟರ್ 
ರಾಜ್ಯ

ಬೆಂಗಳೂರು: ಬಸ್ ನಲ್ಲಿ ರಂಪಾಟ, ವಿದ್ಯಾರ್ಥಿ ಕೈ ಕಚ್ಚಿದ ನಿರ್ವಾಹಕಿ

ಬಸ್ ಪಾಸ್‌ ವಿಚಾರವಾಗಿ ವಿದ್ಯಾರ್ಥಿ ಹಾಗೂ ಲೇಡಿ ಕಂಡಕ್ಟರ್ ನಡುವೆ ಗಲಾಟೆ ನಡೆದು ನಿರ್ವಾಹಕಿ ವಿದ್ಯಾರ್ಥಿಯ ಕೈ ಕಚ್ಚಿಕುವ ಘಟನೆ ...

ಬೆಂಗಳೂರು: ಬಸ್ ಪಾಸ್‌ ವಿಚಾರವಾಗಿ ವಿದ್ಯಾರ್ಥಿ ಹಾಗೂ ಲೇಡಿ ಕಂಡಕ್ಟರ್ ನಡುವೆ ಗಲಾಟೆ ನಡೆದು ನಿರ್ವಾಹಕಿ ವಿದ್ಯಾರ್ಥಿಯ ಕೈ ಕಚ್ಚಿಕುವ ಘಟನೆ ನಗರದ ಗಂಗಮ್ಮನ ಗುಡಿಯ ಕಮ್ಮಗೊಂಡನಹಳ್ಳಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಜಾಲಹಳ್ಳಿ, ಕೆ.ಆರ್. ಪುರಂನ ಬಿಎಂಟಿಸಿ ಬಸ್‌ನಲ್ಲಿ ಈ ಗಲಾಟೆ ನಡೆದಿದ್ದು, ಬಸ್‌ ಪಾಸ್‌ ಸಂಬಂಧ ಪ್ರಾರಂಭವಾದ ಈ ಜಗಳ ಬೀದಿ ಜಗಳವಾಗಿ ಮಾರ್ಪಟ್ಟಿತ್ತು. ವಿದ್ಯಾರ್ಥಿಗಳೊಂದಿಗೆ ಕಾಳಗಕ್ಕೆ ಇಳಿದ ಲೇಡಿ ಕಂಡಕ್ಟರ್, ಆವೇಶದಲ್ಲಿ ವಿದ್ಯಾರ್ಥಿಯ ಎಡಗೈ ತೋಳನ್ನು ಕಚ್ಚಿ ಗಾಯಗೊಳಿಸಿದ್ದಾಳೆ. ವಿದ್ಯಾರ್ಥಿಯ ಕೈ ಮೇಲೆ ನಿರ್ವಾಹಕಿಯ ಹಲ್ಲಿನ ಗುರುತು ಮೂಡಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಬಂದು ಸಮಾಧಾನ ಪಡಿಸಲು ಪ್ರಯತ್ನಿಸಿದರೂ ಕಂಡಕ್ಟರ್ ವಿದ್ಯಾರ್ಥಿ ಮೇಲೆ ಜಿದ್ದಿಗೆ ಬಿದ್ದವರಂತೆ ಜಗಳಕ್ಕೆ ನಿಂತಿದ್ದರು. ಜನ ಗುಂಪಾಗಿ ಸೇರಿದ್ದನ್ನೂ ಲೆಕ್ಕಿಸದ ಕಂಡಕ್ಟರ್ ತಕ್ಷಣ ವಿದ್ಯಾರ್ಥಿ ಕೈಹಿಡಿದು ಕಚ್ಚಿ, ಇನ್ನೊಬ್ಬನಿಗೂ ಕಚ್ಚಲು ಮುಂದಾಗಿದ್ದಾರೆ. ತಪ್ಪಿಸಿಕೊಳ್ಳುವ ಅವಸರದಲ್ಲಿ ಕಂಡಕ್ಟರ್ ಕೆಳಕ್ಕೆ ಬಿದ್ದಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಬ್ಬರನ್ನು ಗಂಗಮ್ಮನಗುಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT