ಬೆಳಗಾವಿಯಲ್ಲಿರುವ ಕಮಾಂಡೋ ತರಬೇತಿ ಕೇಂದ್ರ 
ರಾಜ್ಯ

ಪಿಒಕೆಯಲ್ಲಿ ದಾಳಿ ನಡೆಸಿದ ಯೋಧರಿಗೆ ಬೆಳಗಾವಿಯಲ್ಲಿ ತರಬೇತಿ!

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಕಮಾಂಡೋಗಳು ಬೆಳಗಾವಿಯಲ್ಲಿ ತರಬೇತಿ ಪಡೆದಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಬೆಳಗಾವಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಕಮಾಂಡೋಗಳು ಬೆಳಗಾವಿಯಲ್ಲಿ ತರಬೇತಿ ಪಡೆದಿದ್ದರು ಎಂಬ ಮಾಹಿತಿ  ಇದೀಗ ಬೆಳಕಿಗೆ ಬಂದಿದೆ.

ಪತ್ರಿಕೆಯೊಂದು ವರದಿ ಮಾಡಿರುವಂತೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 7 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತೀಯ ಯೋಧರು ಬೆಳಗಾವಿಯ ಮರಾಠಾ ಲಘು ಪದಾತಿ  ದಳ(ಎಂಎಲ್​ಐಆರ್​ಸಿ)ದ ಪ್ರದೇಶದಲ್ಲಿ ಕಮಾಂಡೋ ತರಬೇತಿ ಪಡೆದಿದ್ದರು ಎಂದು ಹೇಳಲಾಗಿದೆ. ದೇಶದಲ್ಲಿರುವ ಪ್ರಮುಖ ಸೇನಾ ತರಬೇತಿ ಶಾಲೆಗಳಲ್ಲಿ ಬೆಳಗಾವಿಯ ಮರಾಠಾ ಲಘು  ಪದಾತಿ ದಳ ಕಮಾಂಡ ತರಬೇತಿ ಶಾಲೆ ಕೂಡ ಒಂದಾಗಿದ್ದು, ಭಾರತೀಯ ಸೇನೆಯ ಎರಡನೇ ಹಾಗೂ ಏಕೈಕ ಕಿರಿಯ ಕಮಾಂಡೋ ತರಬೇತಿ ಶಾಲೆ ಎಂಬ ಹೆಗ್ಗಳಿಕೆಗೆ ಈ ಕೇಂದ್ರ  ಪಾತ್ರವಾಗಿದೆ.

1975ರಲ್ಲಿ ಸ್ಥಾಪನೆಯಾದ ಬೆಳಗಾವಿ ಎಂಎಲ್​ಐಆರ್​ಸಿ ಕಮಾಂಡೋ ತರಬೇತಿ ಶಾಲೆ ಆರಂಭವಾಗಿದ್ದು, ಸೇನೆಗೆ ಸೇರುವ ಕಿರಿಯ ಸೈನಿಕರು ಅಂದರೆ 21 ವರ್ಷದೊಳಗಿನ ಎಲ್ಲ  ಕಮಾಂಡೋಗಳು ಇಲ್ಲಿಂದಲೇ ತರಬೇತಿ ಪಡೆಯುತ್ತಾರೆ. ಬಳಿಕ ನುರಿತ ತರಬೇತಿಗಾಗಿ ಮಧ್ಯ ಪ್ರದೇಶ ಹಾಗೂ ಡೆಹ್ರಾಡೂನ್ ಗೆ ತೆರಳಬೇಕಾಗುತ್ತದೆ. ಭಾರತೀಯ ಸೇನೆಯ ಮೊದಲ  ಕಮಾಂಡೋ ತರಬೇತಿ ಶಾಲೆಯನ್ನು ಮಧ್ಯಪ್ರದೇಶದ ಮೌವ್ ಪ್ರದೇಶದಲ್ಲಿ ಸ್ಥಾಪಿಸಲಾಗಿತ್ತು. ಬಳಿಕ 1975ರಲ್ಲಿ ಬೆಳಗಾವಿಯ ಎಂಎಲ್​ಐಆರ್​ಸಿಯಲ್ಲಿ ಕಮಾಂಡೋ ತರಬೇತಿ ಶಾಲೆ  ಸ್ಥಾಪಿಸಲಾಯಿತು.

ಮೌವ್ ಪ್ರದೇಶದಲ್ಲಿ ಹಿರಿಯ ಕಮಾಂಡೋಗಳಿಗೆ ಮಾತ್ರ ಈಗ ತರಬೇತಿ ನೀಡಲಾಗುತ್ತಿದೆ. ಆದರೆ ಆರಂಭಿಕ ಹಂತದಲ್ಲಿ ಸೇನೆಗೆ ಸೇರುವ ಎಲ್ಲ ಕಮಾಂಡೋಗಳಿಗೆ ಬೆಳಗಾವಿಯ ಕಮಾಂಡೋ  ತರಬೇತಿ ಶಾಲೆಯಲ್ಲಿ ಕ್ಲಿಷ್ಟ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಭಾರತೀಯ ಸೇನೆಯಲ್ಲಿರುವ ಬಹುತೇಕ  ಕಮಾಂಡೋಗಳು ಬೆಳಗಾವಿಯ ಕಮಾಂಡೋ ತರಬೇತಿ ಶಾಲೆಯಲ್ಲೇ ತರಬೇತಿ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT