ಸುರೇಂದ್ರ ಬಾಬು 
ರಾಜ್ಯ

ಕೆರೆ ಒತ್ತುವರಿ ತೆರವಿಗೆ ಅಡ್ಡಿ, ಉದ್ಯಮಿ ಸುರೇಂದ್ರ ಬಾಬು ಬಂಧನ

ಕೆರೆ ಒತ್ತುವರಿ ತೆರವು ಮಾಡುತ್ತಿದ್ದ ವೇಳೆ ಸರ್ಕಾರಿ ಅಧಿಕಾರಿಯ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉದ್ಯಮಿ ಹಾಗೂ ನಟಿ ಹೇಮಶ್ರೀ...

ಬೆಂಗಳೂರು: ಕೆರೆ ಒತ್ತುವರಿ ತೆರವು ಮಾಡುತ್ತಿದ್ದ ವೇಳೆ ಸರ್ಕಾರಿ ಅಧಿಕಾರಿಯ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉದ್ಯಮಿ ಹಾಗೂ ನಟಿ ಹೇಮಶ್ರೀ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುರೇಂದ್ರ ಬಾಬು ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ನಗರದ ಮಲ್ಲೇಶ್ ಪಾಳ್ಯದ ಗ್ಲೋಬಲ್ ಸ್ಕೂಲ್ ಬಳಿ ಕೆರೆ ಒತ್ತುವರಿ ಮಾಡಿ, ಕಟ್ಟಿದ್ದ ಮನೆಗಳನ್ನು ತೆರವು ಮಾಡಲಾಗುತ್ತಿತ್ತು. ಈ ವೇಳೆ ಉದ್ಯಮಿ ಸುರೇಶ್‌ ಬಾಬು ಕೆ.ಆರ್ ಪುರಂ ತಹಶಿಲ್ದಾರ್ ತೇಜಸ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದರು. ಒತ್ತುವರಿ ತೆರವು ಮಾಡದಂತೆ ಸುರೇಂದ್ರ ಬಾಬು ಸರ್ಕಾರಿ ಅಧಿಕಾರಿಯ ಕೆಲಸಕ್ಕೆ ಅಡ್ಡಿ ಪಡಿಸಿದರು ಎನ್ನಲಾಗಿದೆ. ಅಲ್ಲದೆ ಸುರೇಂದ್ರ ಬಾಬು 30 ಗುಂಟೆ ಕೆರೆ ಒತ್ತುವರಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರ ಬಾಬು ವಿರುದ್ಧ ತಹಶಿಲ್ದಾರ್ ತೇಜಸ್ ಕುಮಾರ್ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ದೂರನ್ನು ಆಧರಿಸಿ ಬೈಯಪ್ಪನಹಳ್ಳಿ ಪೊಲೀಸರು ಸುರೇಂದ್ರ ಬಾಬು ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಸುರೇಂದ್ರ ಬಾಬು ಅವರು 2012 ಅಕ್ಟೋಬರ್ 19 ರಂದು ನಡೆದ ಅವರ ಪತ್ನಿ ಹೇಮಶ್ರೀ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT