ಪ್ರಿಯಾಂಕಾ ಮೇರಿ ಫ್ರಾನ್ಸಿಸ್ 
ರಾಜ್ಯ

ಟೊಳ್ಳು ಬೆದರಿಕೆಗೆ ಹೆದರಲ್ಲ, ಅವರ ಕ್ರೂರತೆಯಿಂದ ಆಘಾತವಾಗಿದೆ: ಉಡುಪಿ ಡಿಸಿ

ಮರಳು ಮಾಫಿಯಾದವರ ಟೊಳ್ಳು ಬೆದರಿಕೆಗೆ ನಾನು ಹೆದರುವುದಿಲ್ಲ, ಆದರೆ ಅವರ ಕ್ರೂರತೆಯಿಂದ ನನಗೆ ಆಘಾತವಾಗಿದೆ, ಅವರಿಗೆ ಕಾನೂನಿನ ಭಯವಿಲ್ಲ, ವ್ಯವಸ್ಥೆಗೆ ...

ಉಡುಪಿ: "ಮರಳು ಮಾಫಿಯಾದವರ ಟೊಳ್ಳು ಬೆದರಿಕೆಗೆ ನಾನು ಹೆದರುವುದಿಲ್ಲ, ಆದರೆ ಅವರ ಕ್ರೂರತೆಯಿಂದ ನನಗೆ ಆಘಾತವಾಗಿದೆ, ಅವರಿಗೆ ಕಾನೂನಿನ ಭಯವಿಲ್ಲ, ವ್ಯವಸ್ಥೆಗೆ ಗೌರವ ಕೂಡ ಕೊಡುವುದಿಲ್ಲ, ಆದರೆ ನಾನು ಹೋರಾಟವನ್ನು ಮುಂದುವರಿಸುತ್ತೇನೆ "  ಉಡುಪಿ ಉಪ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾತುಗಳಿವು. 
ಮಣಿಪಾಲದಲ್ಲಿ ಮಾತನಾಡಿದ ಅವರು, ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತದೆ, ಮುಂದಿನ ದಿನಗಳಲ್ಲಿ ಮರಳು ಮಾಫಿಯ ಮೇಲೆ ದಾಳಿ ನಡೆಸುತ್ತೇನೆ, ಈ ಘಟನೆ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಡಿಸಿ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಉಡುಪಿಯಲ್ಲಿ ನಾಗರಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿ ಕೆಲಸ ಧಿಕ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು. ಸ್ಥಳಕ್ಕೆ ಬಂದ ಡಿಸಿ ಪ್ರಿಯಾಂಕಾ ವಾಪಸ್ ಕೆಲಸಕ್ಕೆ ತೆರಳುವಂತೆ ಅವರೆಲ್ಲರ ಮನವೊಲಿಸಿ ಕಳುಹಿಸಿದರು. 
ಜಿಲ್ಲಾ ನಾಗರಿಕ ಸಮಿತಿ ಕಾರ್ಯಕರ್ತ ನಿತ್ಯಾನಂದ ಮಾತನಾಡಿ, ರಾಜಕೀಯ ನಾಯಕರು ಮರಳು ಮಾಫಿಯಾದವರ ಕೈಗೊಂಬೆಯಾಗಿದ್ದಾರೆ ಎಂದು ಆರಕೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT