ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಣವಿಲ್ಲದೇ ಇನ್ನೂ ಖಾಲಿ ಹೊಡೆಯುತ್ತಿವೆ ಹಲವು ಎಟಿಎಂಗಳು

500 ಹಾಗೂ ಸಾವಿರ ಮುಖ ಬೆಲೆಯ ನೋಟುಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿ 5 ತಿಂಗಳು ಕಳೆದರೂ ನಗರದ ಹಲವು ಎಟಿಎಂಗಳಲ್ಲಿ ಇನ್ನೂ ಹಣ ..

ಬೆಂಗಳೂರು: 500 ಹಾಗೂ ಸಾವಿರ ಮುಖ ಬೆಲೆಯ ನೋಟುಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿ 5 ತಿಂಗಳು ಕಳೆದರೂ ನಗರದ ಹಲವು ಎಟಿಎಂಗಳಲ್ಲಿ ಇನ್ನೂ ಹಣ ಸಿಗುತ್ತಿಲ್ಲ. 
ರಾಮಮೂರ್ತಿನಗರ, ಸಂಜಯನಗರ, ಯಲಹಂಕ, ಚಂದ್ರ ಲೇಔಟ್ ಸೇರಿದಂತೆ ದಕ್ಷಿಣ ಬೆಂಗಳೂರಿನ ಹಲವು ಎಟಿಎಂಗಳ ಹಣವಿಲ್ಲದೇ ಖಾಲಿ ಹೊಡೆಯುತ್ತಿವೆ, ಈ ತಿಂಗಳ ಅಂತ್ಯದ ವರೆಗೂ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹಿರಿಯ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಮೂಲಗಳ ಪ್ರಕಾರ ಇನ್ನೂ ಹಣದ ಕಳ್ಳ ವ್ಯವಹಾರದ ಶಂಕೆ ವ್ಯಕ್ತ ಪಡಿಸಿದ್ದಾರೆ. ಖಾತೆಯಿಂದ ದೊಡ್ಡ ಪ್ರಮಾಣದಲ್ಲಿ ಬೇರೆ ಅಕೌಂಟ್ ಗಳಿಗೆ ಏಜೆಂಟ್ ಗಳಿಂದ ವರ್ಗಾವಣೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೆಲ ಖಾತೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಹಣ ಡ್ರಾ ಮಾಡುತ್ತಿರುವುದರಿಂದ ಎಟಿಎಂ ಗಳಲ್ಲಿ ಹಣ ಖಾಲಿಯಾಗುತ್ತಿದೆ, ಇನ್ನು ಕೆಲವೆಡೆ ಎಟಿಎಂಗಳಿಗೆ ತುಂಬುವ ಹಣದ ಪ್ರಮಾಣ ಕೂಡ ಕಡಿಮೆಯಿರುತ್ತದೆ.
ಪ್ರಮುಖ ಬ್ಯಾಂಕ್ ಗಳು ಪ್ರತಿದಿನ 50 ರಿಂದ 70 ಕೋಟಿ ಹಣ ಪಡೆಯುತ್ತಿವೆ , ಅಂದರೆ ಬ್ಯಾಂಕ್ ಗಳು ನಗರದಲ್ಲಿ ಎಷ್ಟು ಸಂಖ್ಯೆಯ ಶಾಖೆಗಳನ್ನು ಹೊಂದಿರುತ್ತವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.
ಜನರು ಡಿಜಿಟಲ್ ವ್ಯವಹಾರ ಮಾಡಲಿ ಎಂಬ ಉದ್ದೇಶದಿಂದ ಹಣದ ಹರಿವನ್ನು  ನಿಯಂತ್ರಿಸಲಾಗುತ್ತಿದೆ ಎಂದು ಸಹ ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT