ಶಶಿಕಲಾ 
ರಾಜ್ಯ

ಒಂದೇ ತಿಂಗಳಲ್ಲಿ 12 ಬಾರಿ ಎಐಎಡಿಎಂಕೆ ಮುಖಂಡರಿಂದ ಶಶಿಕಲಾ ಭೇಟಿ: ಕಾರಾಗೃಹ ನಿಯಮಗಳ ಬಗ್ಗೆ ಪ್ರಶ್ನೆ

ಅಕ್ರಮ ಆಸ್ತಿ ಪ್ರಕರಣದಲ್ಲಿ 4 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಒಂದೇ ತಿಂಗಳಲ್ಲಿ 12 ಬಾರಿ ತಮ್ಮ ಪಕ್ಷದ ಮುಖಂಡರನ್ನು...

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ 4 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಒಂದೇ ತಿಂಗಳಲ್ಲಿ 12 ಬಾರಿ ತಮ್ಮ ಪಕ್ಷದ ಮುಖಂಡರನ್ನು ಭೇಟಿಯಾಗಿದ್ದಾರೆ. ಶಶಿಕಲಾ ಜೈಲಿನ ನಿಯಮಗಳನ್ನು ಉಲ್ಲಂಘಿಸಿದ್ದು, ಕಾರಾಗೃಹ ನೀತಿ ನಿಯಮಗಳ ಬಗ್ಗೆ ಪ್ರಶ್ನಿಸುವಂತಾಗಿದೆ.
ಮಾಹಿತಿ ಹಕ್ಕು ನಿಯಮದಡಿ ಆರ್ ಟಿ ಐ ಕಾರ್ಯಕ್ತ ನರಸಿಂಹ ಮೂರ್ತಿ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕಾರಾಗೃಹ, ಫೆಬ್ರವರಿ 16 ರಿಂದ ಮಾರ್ಚ್ 18 ರವರೆಗಿನ ಶಶಿಕಲಾ ಭೇಟಿಯ ವಿವರ ನೀಡಿದೆ.
ಶಶಿಕಲಾ ಜೊತೆ ಜೈಲುವಾಸ ಅನುಭವಿಸುತ್ತಿರುವ ಇಳವರಸಿ ಮತ್ತು ಸುಧಾಕರನ್ 4 ಬಾರಿ ಮಾತ್ರ ತಮ್ಮ ಸಂಬಂಧಿಕರನ್ನು ಭೇಟಿಯಾಗಿದ್ದಾರೆ. ಆದರೆ ಶಶಿಕಲಾ 12 ಬಾರಿ ಭೇಟಿಯಾಗಿದ್ದಾರೆ.
ವಕೀಲರು, ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್, ಮತ್ತು ವಿವೇಕ್, ಲೋಕಸಭಾ ಡೆಪ್ಯುಟಿ ಸ್ಪೀಕರ್ ತಂಬಿದೊರೈ ಶಶಿಕಲಾ ಅವರನ್ನು ಭೇಟಿ ಮಾಡಿರುವ ಪ್ರಮುಖರಲ್ಲಿದ್ದಾರೆ.
ಶಶಿಕಲಾ ಅವರನ್ನು ದಿನಕರನ್ ಫೆಬ್ರವರಿ 20 ಹಾಗೂ ಮಾರ್ಚ್ 8 ರಂದು ಭೇಟಿಯಾಗಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ,
ವಿಚಾರಣಾಧೀನ ಕೈದಿಗಳನ್ನು ಅವರ ಸಂಬಂಧಿಕರು ಭೇಟಿ ಮಾಡಲು 15 ದಿನಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ, ಆದರೆ ಶಶಿಕಲಾ ವಿಚಾರದಲ್ಲಿ ಜೈಲಿನ ನಿಯಮಗಳನ್ನು ಮುರಿಯಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ': ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

Video: ಬುರ್ಜ್ ಖಲೀಫಾಗೆ ಬಡಿದ ಸಿಡಿಲು; ಅದ್ಭುತ ವಿಡಿಯೋ ಹಂಚಿಕೊಂಡ ದುಬೈ ಕ್ರೌನ್ ಪ್ರಿನ್ಸ್; ಸಿಕ್ಕಾಪಟ್ಟೆ ವೈರಲ್!

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

SCROLL FOR NEXT