ಸಾಂದರ್ಭಿಕ ಚಿತ್ರ 
ರಾಜ್ಯ

ಲಾರಿ ಮುಷ್ಕರ ಅಂತ್ಯ: ಶೇ.23 ರಷ್ಟು ವಿಮೆ ಪ್ರೀಮಿಯಂ ದರ ಇಳಿಕೆಗೆ ನಿರ್ಧಾರ

ವಿಮೆ ಕಂತು ಏರಿಕೆ, ಹಳೆ ವಾಹನ ನಿಷೇಧ ಹಾಗೂ ಆರ್‌ಟಿಒ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ದಕ್ಷಿಣ ಭಾರತದಾದ್ಯಂತ ಲಾರಿ ಹಾಗೂ...

ಬೆಂಗಳೂರು: ವಿಮೆ ಕಂತು ಏರಿಕೆ, ಹಳೆ ವಾಹನ ನಿಷೇಧ ಹಾಗೂ ಆರ್‌ಟಿಒ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ದಕ್ಷಿಣ ಭಾರತದಾದ್ಯಂತ ಲಾರಿ ಹಾಗೂ ವಾಣಿಜ್ಯ ವಾಹನಗಳ ಮಾಲೀಕರು ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯಗೊಂಡಿದೆ.
ಹೈದರಾಬಾದ್‍ನಲ್ಲಿ ವಿಮಾ ಕ್ಷೇತ್ರ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ( ಐಆರ್‌ಡಿಎ) ಜತೆ ಲಾರಿ ಮಾಲೀಕರು ಶನಿವಾರ ಸಭೆ ನಡೆಸಿದ ನಂತರ ಲಾರಿ ಮುಷ್ಕರ ಅಂತ್ಯಗೊಳಿಸಿದ್ದಾರೆ.
ಶೇ 50.ರಷ್ಟಿದ್ದ ವಿಮೆ ಪ್ರೀಮಿಯಮ್ ದರವನ್ನು ಶೇ 23. ರಷ್ಟು ಇಳಿಕೆ ಮಾಡಲು ಐಆರ್‌ಡಿಎ ಸಮ್ಮತಿಸಿದ ಕಾರಣ, ಲಾರಿ ಮುಷ್ಕರ ಅಂತ್ಯಗೊಳಿಸಲು ಲಾರಿ ಹಾಗೂ ವಾಣಿಜ್ಯ ವಾಹನಗಳ ಮಾಲೀಕರು ತೀರ್ಮಾನಿಸಿದ್ದಾರೆ. ಮುಷ್ಕರ ನಿರತರ ಕೆಲವೊಂದು ಬೇಡಿಕೆಗಳನ್ನು ಭಾಗಶಃ ಈಡೇರಿಸಲಾಗಿದೆ.
ಕಳೆದ 9 ದಿನದಿಂದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ,ಪುದುಚೇರಿ ಹಾಗೂ ತೆಲಂಗಾಣದಲ್ಲಿ ಲಾರಿಗಳ ಸಂಚಾರ ಸ್ಥಗಿತವಾಗಿತ್ತು. ಏಪ್ರಿಲ್ 10 ರಿಂದ ದೇಶಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT