ಸಾಂದರ್ಭಿಕ ಚಿತ್ರ 
ರಾಜ್ಯ

ಭಟ್ಕಳ ರೈಲು ನಿಲ್ದಾಣದಲ್ಲಿ 18 ಲಕ್ಷ ನಿಷೇಧಿತ ನೋಟುಗಳು ವಶ

ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ...

ಭಟ್ಕಳ: ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಕೇರಳದ ಮಂಜೇಶ್ವರ ನಗರದ ಮೊಹಿದ್ದೀನ್ ಬಂಧಿತ ಆರೋಪಿ. ವಶ ಪಡಿಸಿಕೊಂಡಿರುವ 18 ಲಕ್ಷ ರು ಹಣ  ನಿಷೇಧಿತ 500 ಮತ್ತು 1 ಸಾವಿರು ಮುಖಬೆಲೆಯ ಹಳೇ ನೋಟುಗಳಾಗಿವೆ.
ನೇತ್ರಾವತಿ ರೈಲಿನಲ್ಲಿ ಗೋವಾದಿಂದ ಮಂಜೇಶ್ವರಕ್ಕೆ ಹಣವನ್ನು ಕೊಂಡೊಯ್ಯುತ್ತಿದ್ದುದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ.ನಿಷೇಧಿತ ನೋಟು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಭಟ್ಕಳ ರೈಲ್ವೆ ಪೊಲೀಸರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇಬ್ಬರು ಪೊಲೀಸರು ಪ್ರತ್ಯೇಕವಾಗಿ  ಕಳೆದ ರಾತ್ರಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದರು. ರೈಲು ನಿಲ್ದಾಣಕ್ಕೆ  ಆಗಮಿಸಿದ ಆರೋಪಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT