ಸಾಂದರ್ಭಿಕ ಚಿತ್ರ 
ರಾಜ್ಯ

ಭಟ್ಕಳ ರೈಲು ನಿಲ್ದಾಣದಲ್ಲಿ 18 ಲಕ್ಷ ನಿಷೇಧಿತ ನೋಟುಗಳು ವಶ

ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ...

ಭಟ್ಕಳ: ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಕೇರಳದ ಮಂಜೇಶ್ವರ ನಗರದ ಮೊಹಿದ್ದೀನ್ ಬಂಧಿತ ಆರೋಪಿ. ವಶ ಪಡಿಸಿಕೊಂಡಿರುವ 18 ಲಕ್ಷ ರು ಹಣ  ನಿಷೇಧಿತ 500 ಮತ್ತು 1 ಸಾವಿರು ಮುಖಬೆಲೆಯ ಹಳೇ ನೋಟುಗಳಾಗಿವೆ.
ನೇತ್ರಾವತಿ ರೈಲಿನಲ್ಲಿ ಗೋವಾದಿಂದ ಮಂಜೇಶ್ವರಕ್ಕೆ ಹಣವನ್ನು ಕೊಂಡೊಯ್ಯುತ್ತಿದ್ದುದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ.ನಿಷೇಧಿತ ನೋಟು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಭಟ್ಕಳ ರೈಲ್ವೆ ಪೊಲೀಸರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇಬ್ಬರು ಪೊಲೀಸರು ಪ್ರತ್ಯೇಕವಾಗಿ  ಕಳೆದ ರಾತ್ರಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದರು. ರೈಲು ನಿಲ್ದಾಣಕ್ಕೆ  ಆಗಮಿಸಿದ ಆರೋಪಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT