ಬೆಂಗಳೂರು ಕರಗದ ಸಾಂದರ್ಭಿಕ ಚಿತ್ರ 
ರಾಜ್ಯ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಐತಿಹಾಸಿಕ ‘ಬೆಂಗಳೂರು ಕರಗ ಶಕ್ತ್ಯುತ್ಸವ’ಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೈತ್ರ ಪೂರ್ಣಿಮೆಯ...

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೈತ್ರ ಪೂರ್ಣಿಮೆಯ ದಿನವಾದ ಇಂದು ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಮಧ್ಯರಾತ್ರಿ 1 ಗಂಟೆಗೆ ಈ ಉತ್ಸವ ಜರುಗಲಿದೆ. 
ಅರ್ಚಕ ಜ್ಞಾನೇಂದ್ರ ಬಿನ್‌ ಅರ್ಜುನಪ್ಪ ಅವರು ಈ ವರ್ಷ 7ನೇ ಬಾರಿ ಕರಗ ಹೊರಲಿದ್ದಾರೆ. ಕರಗದ ಕೇಂದ್ರಬಿಂದು ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ 65 ಅಡಿ ಎತ್ತರದ ಬಿದಿರಿನ ಕಂಬದ ಮೇಲೆ ಧ್ವಜ ಹಾರಿಸುವ ಮೂಲಕ ಉತ್ಸವಕ್ಕೆ ಎರಡು ದಿನಗಳ ಹಿಂದೆ ಚಾಲನೆ ಸಿಕ್ಕಿದೆ. 
ಇಂದು ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ, ಧಾರ್ಮಿಕ ವಿಧಿವಿಧಾನಗಳು, ರಥೋತ್ಸವ ಇರಲಿವೆ.
ಕರಗ ಹೊರುವ ಜ್ಞಾನೇಂದ್ರ ಅವರಿಗೆ ಇಂದು ಬೆಳಿಗ್ಗೆ ಅರಿಶಿನ ಬಣ್ಣದ ಸೀರೆ ಉಡಿಸಿ, ಬಳೆ ತೊಡಿಸಿ ಕಬ್ಬನ್ ಉದ್ಯಾನದ ಕರಗದ ಕುಂಟೆಯಲ್ಲಿ ದೇವಿಗೆ ಗಂಗೆ ಪೂಜೆ ನೆರವೇರಿಸಲಾಯಿತು. ಹಸಿ ಕರಗವನ್ನು ಮಂಟಪಕ್ಕೆ ಕರೆತಂದು ವಿಶೇಷ ಪೂಜೆ ನೆರವೇರಿಸಿ ದೇವಸ್ಥಾನಕ್ಕೆ ಕರೆತರಲಾಗುತ್ತದೆ. ಮಧ್ಯರಾತ್ರಿ 1 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯದಿಂದ ದ್ರೌಪದಿ­ದೇವಿಯ ಹೂವಿನ ಕರಗ ಹೊರಡಲಿದೆ. ಕತ್ತಿ ಹಿಡಿದ ವೀರಕುಮಾರರು ಸಾಥ್‌ ನೀಡಲಿದ್ದಾರೆ’  ಎಂದು ಕರಗ ಉತ್ಸವ ಸಮಿತಿಯ ಸದಸ್ಯ ಎಂ.ಕೆ.ಗುಣಶೇಖರ್‌ ತಿಳಿಸಿದ್ದಾರೆ.
ಕರಗವು ಹಲಸೂರು ಪೇಟೆಯ ದೇವಸ್ಥಾನಗಳಲ್ಲಿ ಪೂಜೆ ಸ್ವೀಕರಿಸಿ ಕಬ್ಬನ್ ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ, ದೊಡ್ಡಪೇಟೆ, ಕೃಷ್ಣರಾಜ ಮಾರುಕಟ್ಟೆ ಮೂಲಕ ಅಕ್ಕಿಪೇಟೆ, ಅರಳೇಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಕಬ್ಬನ್‌ಪೇಟೆಗಳಲ್ಲಿ ಸಂಚರಿಸಿ ಕುಲ ಪುರೋಹಿತರ ಮನೆಯಲ್ಲಿ ಪೂಜೆ ಸ್ವೀಕರಿಸಿ ನಾಳೆ ಸೂರ್ಯೋದಯದ ವೇಳೆಗೆ ದೇವಸ್ಥಾನ ಸೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!