ಸಾಂದರ್ಭಿಕ ಚಿತ್ರ 
ರಾಜ್ಯ

ಮತ್ತೆ 20 ಬಿಡಿಎಸ್ ವಿದ್ಯಾರ್ಥಿಗಳನ್ನು ಅನರ್ಹಗೊಳಿಸಿದ ರಾಜೀವ್ ಗಾಂಧಿ ವಿ.ವಿ

ಒಕ್ಕಲಿಗ ಸಂಘ ಡೆಂಟಲ್ ಕಾಲೇಜಿನಲ್ಲಿ ಡೆಂಟಲ್ ಪದವಿ ಕೋರ್ಸ್ ಪರೀಕ್ಷೆ ಬರೆಯಲು...

ಬೆಂಗಳೂರು: ಒಕ್ಕಲಿಗ ಸಂಘ ಡೆಂಟಲ್ ಕಾಲೇಜಿನಲ್ಲಿ ಡೆಂಟಲ್ ಪದವಿ ಕೋರ್ಸ್ ಪರೀಕ್ಷೆ ಬರೆಯಲು ಅನರ್ಹರಾದ ವಿದ್ಯಾರ್ಥಿಗಳ ಸಂಖ್ಯೆ 40ಕ್ಕೇರಿದೆ. ಸುಮಾರು 20 ವಿದೇಶಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನರ್ಹರು ಎಂದು ಘೋಷಿಸಲಾಗಿದೆ.
 ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಕಾಲೇಜಿನ ಪ್ರವೇಶಾತಿ ಮಿತಿಗಿಂತ ಹೆಚ್ಚು 40 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗಿದೆ. ಹೆಚ್ಚುವರಿ ವಿದ್ಯಾರ್ಥಿಗಳನ್ನು ತೆಗೆದುಹಾಕುವಂತೆ ಕೂಡ ವಿಶ್ವವಿದ್ಯಾಲಯ ಕಾಲೇಜಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಕಳೆದ ವರ್ಷ ಮೇ ತಿಂಗಳಿನಲ್ಲಿ ಸೂಚನೆ ಕಳುಹಿಸಲಾಗಿದೆ.
ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್, ಪ್ರತಿ ವಿಭಾಗಕ್ಕೆ 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಸಂಸ್ಥೆಗೆ ಅವಕಾಶ ನೀಡಲಾಗಿತ್ತು. ಆದರೆ ಆ ಸಂಸ್ಥೆ 40 ಹೆಚ್ಚು ವಿದ್ಯಾರ್ಥಿಗಳನ್ನು ಎನ್ಆರ್ ಐ ಮತ್ತು ಮ್ಯಾನೇಜ್ ಮೆಂಟ್ ಕೋಟಾದಡಿ ದಾಖಲು ಮಾಡಿಕೊಂಡಿದೆ ಎಂದರು.
ಈ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪಡೆಯದಿದ್ದರಿಂದ ಮತ್ತು ನೀಟ್ ರ್ಯಾಂಕ್ ಕಾರ್ಡುಗಳನ್ನು ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡದಿರುವುದರಿಂದ 40 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ ಎಂದರು.
ವಿವಾದ ಪ್ರಸ್ತುತ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೆ ಒಕ್ಕಲಿಗ ಸಂಘ ನಾವು ಪಾವತಿಸಿದ ಶುಲ್ಕವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್,  ಕಾಲೇಜು ಆಡಳಿತ ಮಂಡಳಿ ನಮ್ಮನ್ನು ಸಂಪರ್ಕಿಸಿದ್ದಾರೆ. ಅಕ್ರಮ ಪ್ರವೇಶಾತಿಯಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ.  ವಿದ್ಯಾರ್ಥಿಗಳು ನಮ್ಮನ್ನು ಸಂಪರ್ಕಿಸಿದರೆ ಅವರು ಪಾವತಿಸಿದ ಶುಲ್ಕವನ್ನು ಹಿಂತಿರುಗಿಸುವಂತೆ ಒತ್ತಾಯಿಸಬಹುದು ಎಂದರು. 
ಒಕ್ಕಲಿಗ ಸಂಘ ಈ ಕುರಿತು ಇದೇ ಶನಿವಾರ ಸಭೆ ಕರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT