ಆಧಾರ್ ಕಾರ್ಡ್ 
ರಾಜ್ಯ

ಅಕ್ರಮ ಎಸಗುತ್ತಿದ್ದ ಆಪರೇಟರ್ ಗಳ ವಿರುದ್ಧ ಯುಐಡಿಎಐ ಕ್ರಮ

2010 ರಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಾರಂಭವಾದಾಗಿನಿಂದಲೂ, ಆಧಾರ್ ಕೇಂದ್ರಗಳ ವಿರುದ್ಧ ಅಕ್ರಮ ಎಸಗುತ್ತಿರುವ ಆರೋಪ ಕೇಳಿಬರುತ್ತಿದೆ.

ಬೆಂಗಳೂರು: 2010 ರಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಾರಂಭವಾದಾಗಿನಿಂದಲೂ, ಆಧಾರ್ ಕೇಂದ್ರಗಳ ವಿರುದ್ಧ ಅಕ್ರಮ ಎಸಗುತ್ತಿರುವ ಆರೋಪ ಕೇಳಿಬರುತ್ತಿದೆ. ನೋಂದಣಿ ನಿಯಮಗಳನ್ನು ಉಲ್ಲಂಘಿಸುವುದು, ಆಧಾರ್ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುವುದು, ಸೂಕ್ತ ದಾಖಲೆಗಳು ಇಲ್ಲದೇ ಇದ್ದರೂ ಸಹ ಆಧಾರ್ ಕಾರ್ಡ್ ನೀಡುವುದು ಹೀಗೆ ಒಂದಲ್ಲಾ ಒಂದು ಆರೋಪ ನಿರಂತರವಾಗಿ ಕೇಳಿಬರುತ್ತಿತ್ತು. ಈಗ ಅದಕ್ಕೆ ಕಡಿವಾಣ ಹಾಕಲು ಯುಐಡಿಎಐ ಕ್ರಮ ಕೈಗೊಳ್ಳುತ್ತಿದೆ. 
ಅಕ್ರಮ ಎಸಗುವ ಕೇಂದ್ರಗಳ ವಿರುದ್ಧ ಯುಐಡಿಎಐ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಕಳೆದ ಕೆಲವು ವಾರಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಯುಐಡಿಎಐ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದೇ ಮೊದಲ ಬಾರಿಗೆ ಆಧಾರ್ ಆಪರೇಟರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಇತ್ತೀಚೆಗಷ್ಟೇ ಪೊನ್ನಂಪೇಟೆಯಲ್ಲಿ ಅಸ್ಸಾಂ ನಿಂದ ಬಂದ ಕಾರ್ಮಿಕರಿಗೆ ಆಧಾರ್ ನಂಬರ್ ನ್ನು ನೀಡುತ್ತಿದ್ದ ಆರೋಪದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಂಗ್ಲಾ ದೇಶಿಗರಿಗೆ ಆಧಾರ್ ಕಾರ್ಡ್ ನೀಡಲಾಗುತ್ತಿದೆ ಸ್ಥಳೀಯರು ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಆಧಾರ್ ಕೇಂದ್ರದ ವಿರುದ್ಧ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್