ಆಧಾರ್ ಕಾರ್ಡ್ 
ರಾಜ್ಯ

ಅಕ್ರಮ ಎಸಗುತ್ತಿದ್ದ ಆಪರೇಟರ್ ಗಳ ವಿರುದ್ಧ ಯುಐಡಿಎಐ ಕ್ರಮ

2010 ರಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಾರಂಭವಾದಾಗಿನಿಂದಲೂ, ಆಧಾರ್ ಕೇಂದ್ರಗಳ ವಿರುದ್ಧ ಅಕ್ರಮ ಎಸಗುತ್ತಿರುವ ಆರೋಪ ಕೇಳಿಬರುತ್ತಿದೆ.

ಬೆಂಗಳೂರು: 2010 ರಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಾರಂಭವಾದಾಗಿನಿಂದಲೂ, ಆಧಾರ್ ಕೇಂದ್ರಗಳ ವಿರುದ್ಧ ಅಕ್ರಮ ಎಸಗುತ್ತಿರುವ ಆರೋಪ ಕೇಳಿಬರುತ್ತಿದೆ. ನೋಂದಣಿ ನಿಯಮಗಳನ್ನು ಉಲ್ಲಂಘಿಸುವುದು, ಆಧಾರ್ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುವುದು, ಸೂಕ್ತ ದಾಖಲೆಗಳು ಇಲ್ಲದೇ ಇದ್ದರೂ ಸಹ ಆಧಾರ್ ಕಾರ್ಡ್ ನೀಡುವುದು ಹೀಗೆ ಒಂದಲ್ಲಾ ಒಂದು ಆರೋಪ ನಿರಂತರವಾಗಿ ಕೇಳಿಬರುತ್ತಿತ್ತು. ಈಗ ಅದಕ್ಕೆ ಕಡಿವಾಣ ಹಾಕಲು ಯುಐಡಿಎಐ ಕ್ರಮ ಕೈಗೊಳ್ಳುತ್ತಿದೆ. 
ಅಕ್ರಮ ಎಸಗುವ ಕೇಂದ್ರಗಳ ವಿರುದ್ಧ ಯುಐಡಿಎಐ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಕಳೆದ ಕೆಲವು ವಾರಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಯುಐಡಿಎಐ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದೇ ಮೊದಲ ಬಾರಿಗೆ ಆಧಾರ್ ಆಪರೇಟರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಇತ್ತೀಚೆಗಷ್ಟೇ ಪೊನ್ನಂಪೇಟೆಯಲ್ಲಿ ಅಸ್ಸಾಂ ನಿಂದ ಬಂದ ಕಾರ್ಮಿಕರಿಗೆ ಆಧಾರ್ ನಂಬರ್ ನ್ನು ನೀಡುತ್ತಿದ್ದ ಆರೋಪದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಂಗ್ಲಾ ದೇಶಿಗರಿಗೆ ಆಧಾರ್ ಕಾರ್ಡ್ ನೀಡಲಾಗುತ್ತಿದೆ ಸ್ಥಳೀಯರು ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಆಧಾರ್ ಕೇಂದ್ರದ ವಿರುದ್ಧ ದೂರು ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT