ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲ್ಲೂಕಿನಲ್ಲಿ ಸಾವಿಗೀಡಾದ ಬಾಲಕ ದೊಡ್ಡಬಸಪ್ಪ ಅವರ ಪೋಷಕರು ಮತ್ತು ಬಂಧುಗಳು 
ರಾಜ್ಯ

ಕೊಪ್ಪಳ: ಬಿಸಿಲಿನ ತಾಪಕ್ಕೆ 13 ವರ್ಷದ ಬಾಲಕ ಸಾವು

ಜಿಲ್ಲೆಯ ಕುಷ್ಠಗಿ ತಾಲ್ಲೂಕಿನ ಜುಮ್ಮಲಾಪುರ್ ಗ್ರಾಮ ಪಂಚಾಯತ್ ನ ಸಾಸ್ವಿಹಾಲ್ ಗ್ರಾಮದ 13 ವರ್ಷದ...

ಕೊಪ್ಪಳ: ಜಿಲ್ಲೆಯ ಕುಷ್ಠಗಿ ತಾಲ್ಲೂಕಿನ ಜುಮ್ಮಲಾಪುರ್ ಗ್ರಾಮ ಪಂಚಾಯತ್ ನ ಸಾಸ್ವಿಹಾಲ್ ಗ್ರಾಮದ 13 ವರ್ಷದ ಬಾಲಕ ನಿನ್ನೆ ತೀವ್ರ ಬಿಸಿಲಿಗೆ ಮೃತಪಟ್ಟಿದ್ದಾನೆ. ಮೊನ್ನೆ ಏಪ್ರಿಲ್ 1ರಿಂದ ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿಲ್ಲ.
ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಬಂದ ದೊಡ್ಡಬಸಪ್ಪ ತನ್ನ ತವರ ಚಾವಣಿ ಮನೆಯಲ್ಲಿ ಮಧ್ಯಾಹ್ನ ಕಿರು ನಿದ್ದೆ ಮಾಡಿದ್ದ. ನಿರ್ಜಲೀಕರಣದ ಸಮಸ್ಯೆಯಿಂದ ಬಳಲುತ್ತಿದ್ದ ದೊಡ್ಡಬಸಪ್ಪನನ್ನು ನಿನ್ನೆ ರಾತ್ರಿ ತಾವರೆಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಕುಷ್ಠಗಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಕುಷ್ಠಗಿಗೆ ಕರೆದೊಯ್ಯುವಾಗಲೇ  ಮಾರ್ಗ ಮಧ್ಯೆ ಮೃತಪಟ್ಟನು.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ, ಅಧಿಕ ತಾಪಮಾನವನ್ನು ತಡೆಯಲು ಆರೋಗ್ಯ ಇಲಾಖೆ ಇತ್ತೀಚೆಗೆ ಕ್ರಮ ಕೈಗೊಳ್ಳುವಂತೆ ಜನರಿಗೆ ಮನವಿ ಮಾಡಿತ್ತು. ತಾಪಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕವಾಗುವ ಸಾಧ್ಯತೆಯಿದ್ದು ತೀವ್ರ ಬರಗಾಲ ಉಂಟಾಗುವ ಲಕ್ಷಣವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್