ಅಕ್ರಮ ಮರಳು ಮಾಫಿಯಾ 
ರಾಜ್ಯ

ಚಿಕ್ಕೋಡಿಯ ತಹಶಿಲ್ದಾರ್ ಮೇಲೆ ಮರಳು ಮಾಫಿಯಾ ದಾಳಿ, ಕಲ್ಲು ತೂರಾಟ

ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವವರು ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಬೆಳಗಾವಿ: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವವರು ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉಡುಪಿ ಎಸಿ ಮೇಲೆ ಮರಳು ಮಾಫಿಯಾ ದಾಳಿ ನಡೆಸಿದ ಬೆನ್ನಲ್ಲೇ ಚಿಕ್ಕೋಡಿಯ ತಹಶಿಲ್ದಾರ್ ಮೇಲೆ ಮರಳು ಮಾಫಿಯಾದವರು ದಾಳಿ ನಡೆಸಿದ್ದಾರೆ. 
ಚಿಕ್ಕೋಡಿ ತಾಲೂಕಿನ ಎಕ್ಸಾಂಬಾದಲ್ಲಿ ಈ ಘಟನೆ ನಡೆದಿದೆ. ಮರಳು ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ತಹಶಿಲ್ದಾರ್ ಇಬ್ಬರು ಸಹಾಯಕ ಅಧಿಕಾರಿಗಳೊಂದಿಗೆ ದೂದ್ ಗಂಗಾ ನದಿ ಪ್ರದೇಶದಲ್ಲಿರುವ ಮರಳು ಗಣಿಗಾರಿಕೆ ನಡೆಸಲಾಗುತ್ತಿರುವ ಪ್ರದೇಶದ ಮೇಲೆ ದಾಳಿ ನಡೆಸಿದ್ದರು.
ಮರಳು ತುಂಬಿದ್ದ ದೋಣಿಗಳನ್ನು ವಶಪಡಿಸಿಕೊಳ್ಳಲು ಹೋದ ತಹಶಿಲ್ದಾರ್ ಸಿಎಸ್ ಕುಲಕರ್ಣಿ ಅವರ ತಂಡದ ಮೇಲೆ ಮರಳು ಮಾಫಿಯಾದವರು ದಾಳಿ ನಡೆಸಿದ್ದು ಕಲ್ಲು ತೂರಾಟ ನಡೆಸಿದ್ದಾರೆ. ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆದರೂ ಸಹ ಅಧಿಕಾರಿಗಳ ತಂಡ ಮರಳು ತುಂಬಿದ್ದ ದೋಣಿಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸುವುದಾಗಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT