ಅಕ್ರಮ ಮರಳು ಮಾಫಿಯಾ 
ರಾಜ್ಯ

ಚಿಕ್ಕೋಡಿಯ ತಹಶಿಲ್ದಾರ್ ಮೇಲೆ ಮರಳು ಮಾಫಿಯಾ ದಾಳಿ, ಕಲ್ಲು ತೂರಾಟ

ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವವರು ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಬೆಳಗಾವಿ: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವವರು ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉಡುಪಿ ಎಸಿ ಮೇಲೆ ಮರಳು ಮಾಫಿಯಾ ದಾಳಿ ನಡೆಸಿದ ಬೆನ್ನಲ್ಲೇ ಚಿಕ್ಕೋಡಿಯ ತಹಶಿಲ್ದಾರ್ ಮೇಲೆ ಮರಳು ಮಾಫಿಯಾದವರು ದಾಳಿ ನಡೆಸಿದ್ದಾರೆ. 
ಚಿಕ್ಕೋಡಿ ತಾಲೂಕಿನ ಎಕ್ಸಾಂಬಾದಲ್ಲಿ ಈ ಘಟನೆ ನಡೆದಿದೆ. ಮರಳು ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ತಹಶಿಲ್ದಾರ್ ಇಬ್ಬರು ಸಹಾಯಕ ಅಧಿಕಾರಿಗಳೊಂದಿಗೆ ದೂದ್ ಗಂಗಾ ನದಿ ಪ್ರದೇಶದಲ್ಲಿರುವ ಮರಳು ಗಣಿಗಾರಿಕೆ ನಡೆಸಲಾಗುತ್ತಿರುವ ಪ್ರದೇಶದ ಮೇಲೆ ದಾಳಿ ನಡೆಸಿದ್ದರು.
ಮರಳು ತುಂಬಿದ್ದ ದೋಣಿಗಳನ್ನು ವಶಪಡಿಸಿಕೊಳ್ಳಲು ಹೋದ ತಹಶಿಲ್ದಾರ್ ಸಿಎಸ್ ಕುಲಕರ್ಣಿ ಅವರ ತಂಡದ ಮೇಲೆ ಮರಳು ಮಾಫಿಯಾದವರು ದಾಳಿ ನಡೆಸಿದ್ದು ಕಲ್ಲು ತೂರಾಟ ನಡೆಸಿದ್ದಾರೆ. ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆದರೂ ಸಹ ಅಧಿಕಾರಿಗಳ ತಂಡ ಮರಳು ತುಂಬಿದ್ದ ದೋಣಿಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸುವುದಾಗಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT