ಆನೆ 
ರಾಜ್ಯ

ಆನೆ ದಾಳಿ: ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಸಾವು

ದುಬಾರೆ ಆನೆ ಶಿಬಿರದಲ್ಲಿದ್ದ ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಅವರು ಆನೆ ದಾಳಿಗೆ ಬಲಿಯಾಗಿದ್ದಾರೆ...

ಮಡಿಕೇರಿ: ದುಬಾರೆ ಆನೆ ಶಿಬಿರದಲ್ಲಿದ್ದ ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಅವರು ಆನೆ ದಾಳಿಗೆ ಬಲಿಯಾಗಿದ್ದಾರೆ. 
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 45 ವರ್ಷದ ಅಣ್ಣು ಅವರು ತಮ್ಮ ಆನೆ ಹುಡುಕಾಟದಲ್ಲಿದ್ದಾಗ ಏಳು ವರ್ಷದ ಆನೆ ಕಾರ್ತಿಕ್ ಅಣ್ಣು ಮೇಲೆ ದಾಳಿ ಮಾಡಿದೆ. ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಣ್ಣು ಮೃತಪಟ್ಟಿದ್ದಾರೆ. ಅಣ್ಣು ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದರು. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಿನ್ನಪ್ಪ ಎಂಬುವರು ಮಾತನಾಡಿ, ದುಬಾರೆ ಆನೆ ಶಿಬಿರದಲ್ಲಿ ಇಂತಹ ಪ್ರಕರಣ ನಡೆದಿದ್ದು ಇದೇ ಮೊದಲು. ಪ್ರವಾಸಿಗರು ಮತ್ತು ಮಾವುತರ ಮೇಲೆ ಶಿಬಿರದ ಆನೆಗಳು ಇಲ್ಲಿಯವರೆಗೂ ಯಾವುದೇ ರೀತಿಯ ದಾಳಿ ಮಾಡಿರಲಿಲ್ಲ. ಆದರೆ ಮಾವುತ ಅಣ್ಣುವಿನ ಸಾವು ನಿಜಕ್ಕೂ ದುರದುಷ್ಟಕರ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT