ಸಾಂದರ್ಭಿಕ ಚಿತ್ರ 
ರಾಜ್ಯ

ರಾಸಾಯನಿಕ ತ್ಯಾಜ್ಯ ಜ್ವಾಲೆಗೆ ಬಾಲಕ ಬಲಿ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾದರಿ ಸಂಗ್ರಹ

ಶಯದನಹಳ್ಳಿಯ ಜಮೀನೊಂದರಲ್ಲಿ ಸುರಿದಿದ್ದ ರಾಸಾಯನಿಕ ತ್ಯಾಜ್ಯದಿಂದ ಹೊರಹೊಮ್ಮಿದ ಜ್ವಾಲೆಗೆ ಬಿದ್ದು ಬಾಲಕನೊಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ...

ಮೈಸೂರು: ಶಯದನಹಳ್ಳಿಯ ಜಮೀನೊಂದರಲ್ಲಿ ಸುರಿದಿದ್ದ ರಾಸಾಯನಿಕ ತ್ಯಾಜ್ಯದಿಂದ ಹೊರಹೊಮ್ಮಿದ ಜ್ವಾಲೆಗೆ ಬಿದ್ದು ಬಾಲಕನೊಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ತ್ಯಾಜ್ಯದ ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. 
ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ಕೇಂದ್ರೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಪರಿಸರ ಅಧಿಕಾರಿ ನಿಂಗರಾಜು ಹೇಳಿದ್ದಾರೆ. 
ರಾಸಾಯನಿಕ ತ್ಯಾಜ್ಯವನ್ನು ಸುರಿದಿದ್ದರಿಂದ ತಾಪಮಾನ ಹೆಚ್ಚಾಗಿ  ಕೆಮಿಕಲ್ ರಿಯಾಕ್ಷನ್ ಆಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ತ್ಯಾಜ್ಯ ಸುರಿದಿರುವ ಸ್ಥಳದಳ್ಲಿ 110 ಡಿಗ್ರಿ ಸೆಲ್ಸಿಯಲ್ ತಾಪಮಾನವಿದೆ, ಈ ಸ್ಥಳ ಮೇಟಗಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಮೀಪವಿದೆ. 
ತ್ಯಾಜ್ಯದ ಮೇಲೆ ಯಾವುದೇ ವಸ್ತು ಎಸೆದರು ಅದನ್ನು ತ್ಯಾಜ್ಯ ಎಳೆದುಕೊಳ್ಳುತ್ತದೆ. ಬಾಲಕ ಕ್ರಿಕೆಟ್ ಬಾಲ್ ತರಲು ಹೋದಾಗ ಅಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
ನೀರು ಸುರಿದಂತೆ ದಟ್ಟ ಹೊಗೆಯೊಂದಿಗೆ ಬೆಂಕಿ ಹೊರಹೊಮ್ಮುತ್ತಿದೆ. ಈ ಸ್ಥಳದಲ್ಲಿ ಎರಡು ಟ್ಯಾಂಕರ್‌ ನೀರು ಸುರಿದರೂ ಬೆಂಕಿ ಆರುತ್ತಿಲ್ಲ, ಹೀಗಾಗಿ ಈ ಸ್ಥಳವನ್ನು  ಮೇ 2 ರವರೆಗೂ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ 144 ನೇ ಸೆಕ್ಷನ್ ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT