ಬೆಂಗಳೂರಲ್ಲಿ ನಿನ್ನೆ ಸುರಿದ ಮಳೆ 
ರಾಜ್ಯ

ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರದ ಮಳೆರಾಯ

ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಸುರಿದ ಬಿರುಗಾಳಿ ಕೂಡಿದ ಮಳೆಯು ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ...

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಸುರಿದ ಬಿರುಗಾಳಿ ಕೂಡಿದ ಮಳೆಯು ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಿದೆ. 
ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ, ಮೈಸೂರು ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದ್ದು ತಾಪಮಾನ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು  ಇಲಾಖೆ ಪ್ರಕಾರ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ 13 ಮಿಮಿ ಮಳೆಯಾಗಿದೆ. ನಿನ್ನೆ ರಾತ್ರಿ 9.30ರ ವರೆಗೆ ರಾಜ್ಯದಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಎಂಬ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.
ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣಹಿತ್ತೆನ ಹೆಬ್ಬಿಗಿಲಲ್ಲಿ ಅಧಿಕ ಪ್ರಮಾಣದ ಮಳೆಯಾಗಿದೆ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಿದ್ದು ಸುಮಾರು 9ಮಿಮೀಟರಿ ನಿಂದ 0.5 ಮಿಮೀಟರ್ ಮಳೆಯಾಗಿದೆ.
ಬೆಂಗಳೂರು ಹೊರತು ಪಡಿಸಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು, ಚಾಮರಾಜನಗರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಬಿಸಿಲ ತಾಪ ಮುಂದುವರಿದಿದ್ದು, 40 ಡಿಗ್ರಿ ಸೆಲ್ಸಿಯಲ್ ಉಷ್ಣಾಂಸ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

LPG ಬಿಕ್ಕಟ್ಟು ತೀವ್ರ: ಬೆಂಗಳೂರಿನ ಆಟೋ ಚಾಲಕರ ಬದುಕು ಬೀದಿಗೆ!

IPL 2026: ರನ್ ಕದಿಯಲು ಹೋಗಿ ರನೌಟ್ ಆದ ರಘುವಂಶಿ, ಮೈದಾನದಲ್ಲೇ ಸಿಟ್ಟಾದ ರಿಂಕ್ ಸಿಂಗ್ !Video

SCROLL FOR NEXT