ಅಪಹರಣಕಾರರು 
ರಾಜ್ಯ

ಹಣಕ್ಕಾಗಿ ಸ್ನೇಹಿತೆಯಿಂದಲೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ, ಪ್ರಕರಣ ಸುಖಾಂತ್ಯ

23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ವಿದ್ಯಾರ್ಥಿನಿಯನ್ನು ಸ್ನೇಹಿತೆಯೇ ತನ್ನ ಪ್ರಿಯಕರನೊಂದಿಗೆ ಸೇರಿ ಅಪರಹಣ...

ಬೆಳಗಾವಿ: 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ವಿದ್ಯಾರ್ಥಿನಿಯನ್ನು ಸ್ನೇಹಿತೆಯೇ ತನ್ನ ಪ್ರಿಯಕರನೊಂದಿಗೆ ಸೇರಿ ಅಪರಹಣ ಮಾಡಿದ್ದು, ಇದೀಗ ಕಂಬಿ ಎಣಿಸುವಂತಾಗಿದೆ. 
ಜಿಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅರ್ಪಿತಾ ನಾಯಕ್, ಬೆಳಗಾವಿಯ ಟಿಳಕವಾಡಿ ಸಾಯಿ ಪ್ಲಾಜಾ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದಳು. ಏಪ್ರಿಲ್ 17ರ ರಾತ್ರಿ ಅರ್ಪಿತಾಳನ್ನು ಅಪಹರಣ ಮಾಡಲಾಗಿತ್ತು. ನಂತರ ತಾಯಿಗೆ ಕರೆ ಮಾಡಿ ತನ್ನನ್ನು ಅಪಹರಿಸಲಾಗಿದೆ ಎಂದು ಹೇಳಿದ್ದಳು. ಇದರಿಂದ ಆತಂಕಗೊಂಡ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 
ಟಿಳಕವಾಡಿ ಪೊಲೀಸರು ಪ್ರಕರಣ ಕೈಗೊಂಡ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 17ರ ರಾತ್ರಿ ಊಟಕ್ಕೆಂದು ಅರ್ಪಿತಾಳನ್ನು ಬೆಳಗಾವಿಯ ಹೊಟೇಲ್ ಒಂದಕ್ಕೆ ಸ್ನೇಹಿತೆ ಕರೆದುಕೊಂಡು ಹೋಗಿದ್ದಾಳೆ. ಊಟವಾದ ನಂತರ ಏಳನೀರಿನಲ್ಲಿ ನಿದ್ರೆ ಮಾತ್ರೆ ಹಾಕಿ ಅದನ್ನು ಅರ್ಪಿತಾಳಿಗೆ ಕುಡಿಸಿದ್ದಾರೆ. ಏಳುನೀರು ಕುಡಿದ ನಂತರ ಅರ್ಪಿತಾ ಮೂರ್ಛೆ ಹೋಗಿದ್ದಳು. ಬಳಿಕ ಆಕೆಗೆ ಕ್ಲೋರೋಫಾರ್ಮ ನೀಡಿ ಇಂಡಿಕಾ ಕಾರಿನಲ್ಲಿ ಅಪಹರಿಸಿ ಬೆಳಗಾವಿಯಿಂದ ಗದಗ ನಗರಕ್ಕೆ ಕರೆದೊಯ್ದು ಮನೆಯೊಂದರಲ್ಲಿ ಕಟ್ಟಿ ಹಾಕಿದ್ದರು. 
ಅಪಹರಣಕಾರರು ನಂತರ ಅರ್ಪಿತಾಳ ತಂದೆ ಗೋವಿಂದಪ್ಪ ನಾಯಕ್ ಅವರಿಗೆ ಕರೆ ಮಾಡಿ ನಾವು ದಾವೂದ್ ಇಬ್ರಾಹಿಂ ಕಡೆಯವರು ಎಂದು ಹೇಳಿ 5 ಕೋಟಿ ರುಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಡಿಸಿಪಿ ಜಿ ರಾಧಿಕಾ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT