ಅಪಹರಣಕಾರರು 
ರಾಜ್ಯ

ಹಣಕ್ಕಾಗಿ ಸ್ನೇಹಿತೆಯಿಂದಲೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ, ಪ್ರಕರಣ ಸುಖಾಂತ್ಯ

23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ವಿದ್ಯಾರ್ಥಿನಿಯನ್ನು ಸ್ನೇಹಿತೆಯೇ ತನ್ನ ಪ್ರಿಯಕರನೊಂದಿಗೆ ಸೇರಿ ಅಪರಹಣ...

ಬೆಳಗಾವಿ: 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ವಿದ್ಯಾರ್ಥಿನಿಯನ್ನು ಸ್ನೇಹಿತೆಯೇ ತನ್ನ ಪ್ರಿಯಕರನೊಂದಿಗೆ ಸೇರಿ ಅಪರಹಣ ಮಾಡಿದ್ದು, ಇದೀಗ ಕಂಬಿ ಎಣಿಸುವಂತಾಗಿದೆ. 
ಜಿಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅರ್ಪಿತಾ ನಾಯಕ್, ಬೆಳಗಾವಿಯ ಟಿಳಕವಾಡಿ ಸಾಯಿ ಪ್ಲಾಜಾ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದಳು. ಏಪ್ರಿಲ್ 17ರ ರಾತ್ರಿ ಅರ್ಪಿತಾಳನ್ನು ಅಪಹರಣ ಮಾಡಲಾಗಿತ್ತು. ನಂತರ ತಾಯಿಗೆ ಕರೆ ಮಾಡಿ ತನ್ನನ್ನು ಅಪಹರಿಸಲಾಗಿದೆ ಎಂದು ಹೇಳಿದ್ದಳು. ಇದರಿಂದ ಆತಂಕಗೊಂಡ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 
ಟಿಳಕವಾಡಿ ಪೊಲೀಸರು ಪ್ರಕರಣ ಕೈಗೊಂಡ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 17ರ ರಾತ್ರಿ ಊಟಕ್ಕೆಂದು ಅರ್ಪಿತಾಳನ್ನು ಬೆಳಗಾವಿಯ ಹೊಟೇಲ್ ಒಂದಕ್ಕೆ ಸ್ನೇಹಿತೆ ಕರೆದುಕೊಂಡು ಹೋಗಿದ್ದಾಳೆ. ಊಟವಾದ ನಂತರ ಏಳನೀರಿನಲ್ಲಿ ನಿದ್ರೆ ಮಾತ್ರೆ ಹಾಕಿ ಅದನ್ನು ಅರ್ಪಿತಾಳಿಗೆ ಕುಡಿಸಿದ್ದಾರೆ. ಏಳುನೀರು ಕುಡಿದ ನಂತರ ಅರ್ಪಿತಾ ಮೂರ್ಛೆ ಹೋಗಿದ್ದಳು. ಬಳಿಕ ಆಕೆಗೆ ಕ್ಲೋರೋಫಾರ್ಮ ನೀಡಿ ಇಂಡಿಕಾ ಕಾರಿನಲ್ಲಿ ಅಪಹರಿಸಿ ಬೆಳಗಾವಿಯಿಂದ ಗದಗ ನಗರಕ್ಕೆ ಕರೆದೊಯ್ದು ಮನೆಯೊಂದರಲ್ಲಿ ಕಟ್ಟಿ ಹಾಕಿದ್ದರು. 
ಅಪಹರಣಕಾರರು ನಂತರ ಅರ್ಪಿತಾಳ ತಂದೆ ಗೋವಿಂದಪ್ಪ ನಾಯಕ್ ಅವರಿಗೆ ಕರೆ ಮಾಡಿ ನಾವು ದಾವೂದ್ ಇಬ್ರಾಹಿಂ ಕಡೆಯವರು ಎಂದು ಹೇಳಿ 5 ಕೋಟಿ ರುಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಡಿಸಿಪಿ ಜಿ ರಾಧಿಕಾ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT