ಸಂಗ್ರಹ ಚಿತ್ರ 
ರಾಜ್ಯ

ಶಾಸಕರಾಗಿ ಗೀತಾ ಮಹದೇವ ಪ್ರಸಾದ್, ಕಳಲೆ ಕೇಶವ ಮೂರ್ತಿ ಪ್ರಮಾಣ ವಚನ ಸ್ವೀಕಾರ

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ಅವರು ಶುಕ್ರವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ಅವರು ಶುಕ್ರವಾರ ಶಾಸಕರಾಗಿ ಪ್ರಮಾಣ ವಚನ  ಸ್ವೀಕರಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಪೀಕರ್ ಕೋಳಿವಾಡ ಅವರು ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್ ಹಾಗೂ ನಂಜನಗೂಡು ಶಾಸಕ ಕಳಲೆ ಕೇಶವ ಮೂರ್ತಿ ಅವರಿಗೆ ಪ್ರತಿಜ್ಞಾ ವಿಧಿ  ಬೋದಿಸಿದರು. ಗೀತಾ ಮಹದೇವ ಪ್ರಸಾದ್ ಅವರು ಮಲೈ ಮಹದೇಶ್ವರ ಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕಳಲೆ ಕೇಶವ ಮೂರ್ತಿ ಅವರು ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹೆಸರಿನಲ್ಲಿ ಪ್ರತಿಜ್ಞಾ ವಿಧಿ  ಸ್ವೀಕರಿಸಿದರು.

ಇತ್ತೀಚೆಗೆ ನಡೆದಿದ್ದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ವಿಜಯ ಶಾಲಿಗಳಾಗಿದ್ದರು. ಮಾಜಿ ಸಚಿವ ಎಚ್ ಎಸ್ ಮಹದೇವ  ಪ್ರಸಾದ್ ಅವರ ನಿಧನದಿಂದಾಗಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅಂತೆಯೇ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ  ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT