ಸಂಗ್ರಹ ಚಿತ್ರ 
ರಾಜ್ಯ

ಶಾಸಕರಾಗಿ ಗೀತಾ ಮಹದೇವ ಪ್ರಸಾದ್, ಕಳಲೆ ಕೇಶವ ಮೂರ್ತಿ ಪ್ರಮಾಣ ವಚನ ಸ್ವೀಕಾರ

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ಅವರು ಶುಕ್ರವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ಅವರು ಶುಕ್ರವಾರ ಶಾಸಕರಾಗಿ ಪ್ರಮಾಣ ವಚನ  ಸ್ವೀಕರಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಪೀಕರ್ ಕೋಳಿವಾಡ ಅವರು ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್ ಹಾಗೂ ನಂಜನಗೂಡು ಶಾಸಕ ಕಳಲೆ ಕೇಶವ ಮೂರ್ತಿ ಅವರಿಗೆ ಪ್ರತಿಜ್ಞಾ ವಿಧಿ  ಬೋದಿಸಿದರು. ಗೀತಾ ಮಹದೇವ ಪ್ರಸಾದ್ ಅವರು ಮಲೈ ಮಹದೇಶ್ವರ ಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕಳಲೆ ಕೇಶವ ಮೂರ್ತಿ ಅವರು ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹೆಸರಿನಲ್ಲಿ ಪ್ರತಿಜ್ಞಾ ವಿಧಿ  ಸ್ವೀಕರಿಸಿದರು.

ಇತ್ತೀಚೆಗೆ ನಡೆದಿದ್ದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಗೀತಾ ಮಹದೇವ ಪ್ರಸಾದ್ ಹಾಗೂ ಕಳಲೆ ಕೇಶವ ಮೂರ್ತಿ ವಿಜಯ ಶಾಲಿಗಳಾಗಿದ್ದರು. ಮಾಜಿ ಸಚಿವ ಎಚ್ ಎಸ್ ಮಹದೇವ  ಪ್ರಸಾದ್ ಅವರ ನಿಧನದಿಂದಾಗಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅಂತೆಯೇ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ  ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT