ರಾಜ್ಯ

ಎನ್ ಜಿಟಿ ಛೀಮಾರಿಯ ನಂತರ ಬೆಳ್ಳಂದೂರು ಕೆರೆ ಸ್ವಚ್ಛತಾ ಯೋಜನೆ ಸಿದ್ಧ!

ಛೀಮಾರಿ ಹಾಕಿದ ನಂತರ ಎಚ್ಚೆತ್ತುಕೊಂಡಿರುವ ನಾಗರಿಕ ಸಂಸ್ಥೆಗಳು ಕೆರೆ ಸ್ವಚ್ಛತಾ ಯೋಜನೆಗೆ ಕಾರ್ಯಸೂಚಿಯನ್ನು ಸಿದ್ಧಪಡಿಸಿ ಪ್ರತಿಯೊಂದು ಸಂಸ್ಥೆಯೂ ಒಂದೊಂದು ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಬೆಳ್ಳಂದೂರು ಕೆರೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸಿವಿಕ್ ಸಂಸ್ಥೆ (ಬೆಂಗಳೂರಿನ ನಾಗರಿಕ ಸೇವಾ ಸಂಸ್ಥೆ) ಗೆ ಛೀಮಾರಿ ಹಾಕಿದ ನಂತರ ಎಚ್ಚೆತ್ತುಕೊಂಡಿರುವ ನಾಗರಿಕ ಸಂಸ್ಥೆಗಳು ಕೆರೆ ಸ್ವಚ್ಛತಾ ಯೋಜನೆಗೆ ಕಾರ್ಯಸೂಚಿಯನ್ನು ಸಿದ್ಧಪಡಿಸಿ ಪ್ರತಿಯೊಂದು ಸಂಸ್ಥೆಯೂ ಒಂದೊಂದು ಜವಾಬ್ದಾರಿಯನ್ನು ಹೊತ್ತುಕೊಂಡಿದೆ. 
ನಗರಾಭಿವೃದ್ಧಿ ಇಲಾಖೆ(ಯುಡಿಡಿ) ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ಬಿಬಿಎಂಪಿ, ಬಿಡಿಎ ಸೇರಿದಂತೆ ವಿವಿಧ ನಾಗರಿಕ ಸೇವಾ ಸಂಸ್ಥೆ(ಸಿವಿಕ್ ಸಂಸ್ಥೆ) ಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಯಸೂಚಿಯನ್ನು ಅಂಗೀಕರಿಸಲಾಗಿದೆ. 
ಮುಂದಿನ ವಾರದಿಂದ ಬೆಳ್ಳಂದೂರು ಕೆರೆ ಸ್ವಚ್ಛತಾ ಕಾಮಗಾರಿ ಪ್ರಾರಂಭವಾಗಲಿದ್ದು, ಬಿಡಿಎ ಕೆರೆಯಲ್ಲಿರುವ ಅವಶೇಷಗಳನ್ನು ಹಾಗೂ ತ್ಯಾಜ್ಯಗಳನ್ನು ತೆಗೆಸಲಿದೆ. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ತ್ಯಾಜ್ಯಗಳನ್ನು ಎಸೆಯದಂತೆ ನಿಗಾ ವಹಿಸಲು ಸಿಸಿಟಿವಿಯನ್ನು ಅಳವಡಿಸಿ ಅದನ್ನು ನಿರ್ವಹಿಸುವ ಕೆಲಸ ಬಿಬಿಎಂಪಿಯ ಹೆಗಲೇರಿದೆ. ಇನ್ನು ಕೆಎಸ್ ಪಿಸಿಬಿ ಕೆರೆ ಬಳಿ ಇರುವ ಕೈಗಾರಿಕೆಗಳನ್ನು ಮುಚ್ಚಿಸಿ ಕೆರೆಯೊಳಗೆ ಕೈಗಾರಿಕೆಗಳ ತ್ಯಾಜ್ಯ ಹರಿಯದಂತೆ ನಿಗಾ ವಹಿಸುವ ಜವಾಬ್ದಾರಿ ಪಡೆದಿದೆ.  
ಸಭೆಯ ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಮಹೇಂದ್ರ ಜೈನ್, ಕೆರೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸಿವಿಕ್ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಲಾಗಿದೆ. ಆದೇಶದ ಪ್ರತಿ ನಮಗೆ ಇನ್ನಷ್ಟೇ ಬರಬೇಕಿದ್ದರೂ ಕೆರೆಯನ್ನು ಸ್ವಚ್ಛಗೊಳಿಸುವುದಕ್ಕೆ ಪ್ರತಿಯೊಂದು ಸಂಸ್ಥೆಗೂ ಒಂದೊಂದು ಜವಾಬ್ದಾರಿಯನ್ನು ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ