ಡಾ. ರಾಜ್‌ ಕುಮಾರ್ ಸಮಾಧಿ 
ರಾಜ್ಯ

ಪಠ್ಯ ಪುಸ್ತಕ ಸೇರಲಿದೆ ವರನಟ ಡಾ. ರಾಜ್‌ ಕುಮಾರ್ ಜೀವನ

ವರನಟ, ನಟಸಾರ್ವಭೌಮ ಡಾ. ರಾಜ್‌ ಕುಮಾರ್ ಅವರ ನಡೆ-ನುಡಿ ಸೇರಿದಂತೆ ಅವರ ಜೀವನಕ್ಕೆ ಸಂಬಂಧಿಸಿದ ಹಲವು....

ಬೆಂಗಳೂರು: ವರನಟ, ನಟಸಾರ್ವಭೌಮ ಡಾ. ರಾಜ್‌ ಕುಮಾರ್ ಅವರ ನಡೆ-ನುಡಿ ಸೇರಿದಂತೆ ಅವರ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಸೋಮವಾರ ಹೇಳಿದ್ದಾರೆ.
ಇಂದು ಡಾ. ರಾಜ್ ಕುಮಾರ್ ಅವರ 89ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ರಾಜ್‌ ಕುಮಾರ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ರಾಜ್ ಕುಮಾರ್ ಅವರು ಒಬ್ಬ ಅಪ್ರತಿಮ ಕಲಾವಿದರು. ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟರಲ್ಲಿ ಡಾ. ರಾಜ್ ಕುಮಾರ್ ಸಹ ಒಬ್ಬರು. ರಂಗಭೂಮಿ ಮತ್ತು ಚಿತ್ರರಂಗಕ್ಕೆ ರಾಜ್ ಕುಮಾರ್ ಕೊಡುಗೆ ಅಪಾರ. ಯುವ ಪೀಳಿಗೆಗೆ ಡಾ. ರಾಜ್ ಕುಮಾರ್ ಮಾದರಿ. ಹೀಗಾಗಿ, ಮುಂದಿನ ವರ್ಷದಿಂದ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯನ್ನ ಪಠ್ಯ ವಿಷಯದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ರಾಜ್ ಕುಮಾರ್ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಗೃಹ ಸಚಿವ ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹಾಗೂ ಶಾಸಕ ಮುನಿರತ್ನ ಅವರು ಸೇರಿದಂತೆ ಹಲವು ಗಣ್ಯರು ರಾಜ್ ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT