ಡಾ. ರಾಜ್‌ ಕುಮಾರ್ ಸಮಾಧಿ 
ರಾಜ್ಯ

ಪಠ್ಯ ಪುಸ್ತಕ ಸೇರಲಿದೆ ವರನಟ ಡಾ. ರಾಜ್‌ ಕುಮಾರ್ ಜೀವನ

ವರನಟ, ನಟಸಾರ್ವಭೌಮ ಡಾ. ರಾಜ್‌ ಕುಮಾರ್ ಅವರ ನಡೆ-ನುಡಿ ಸೇರಿದಂತೆ ಅವರ ಜೀವನಕ್ಕೆ ಸಂಬಂಧಿಸಿದ ಹಲವು....

ಬೆಂಗಳೂರು: ವರನಟ, ನಟಸಾರ್ವಭೌಮ ಡಾ. ರಾಜ್‌ ಕುಮಾರ್ ಅವರ ನಡೆ-ನುಡಿ ಸೇರಿದಂತೆ ಅವರ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಸೋಮವಾರ ಹೇಳಿದ್ದಾರೆ.
ಇಂದು ಡಾ. ರಾಜ್ ಕುಮಾರ್ ಅವರ 89ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ರಾಜ್‌ ಕುಮಾರ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ರಾಜ್ ಕುಮಾರ್ ಅವರು ಒಬ್ಬ ಅಪ್ರತಿಮ ಕಲಾವಿದರು. ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟರಲ್ಲಿ ಡಾ. ರಾಜ್ ಕುಮಾರ್ ಸಹ ಒಬ್ಬರು. ರಂಗಭೂಮಿ ಮತ್ತು ಚಿತ್ರರಂಗಕ್ಕೆ ರಾಜ್ ಕುಮಾರ್ ಕೊಡುಗೆ ಅಪಾರ. ಯುವ ಪೀಳಿಗೆಗೆ ಡಾ. ರಾಜ್ ಕುಮಾರ್ ಮಾದರಿ. ಹೀಗಾಗಿ, ಮುಂದಿನ ವರ್ಷದಿಂದ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯನ್ನ ಪಠ್ಯ ವಿಷಯದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ರಾಜ್ ಕುಮಾರ್ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಗೃಹ ಸಚಿವ ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹಾಗೂ ಶಾಸಕ ಮುನಿರತ್ನ ಅವರು ಸೇರಿದಂತೆ ಹಲವು ಗಣ್ಯರು ರಾಜ್ ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ ಚಳಿಗಾಲದ ಅಧಿವೇಶನ: ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು- ವಿಪಕ್ಷಗಳಿಗೆ ಪ್ರಧಾನಿ ಮೋದಿ ಒತ್ತಾಯ

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

SCROLL FOR NEXT