ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಜಿಲ್ಲೆಗಳಲ್ಲಿ ಆಧಾರ್ ಪರಿಹಾರ ಕೇಂದ್ರಗಳ ಕೊರತೆ; ಜನತೆಗೆ ಸಮಸ್ಯೆ

ಪ್ರತಿಬಾರಿಯೂ ಆಧಾರ್ ಆಧಾರಿತ ಅಭಿಯಾನ ಘೋಷಣೆಯಾದಾಗ ಅದಕ್ಕೆ ಸಂಬಂಧಪಟ್ಟ...

ಬೆಂಗಳೂರು: ಪ್ರತಿಬಾರಿಯೂ ಆಧಾರ್ ಆಧಾರಿತ ಅಭಿಯಾನ ಘೋಷಣೆಯಾದಾಗ ಅದಕ್ಕೆ ಸಂಬಂಧಪಟ್ಟ ದೂರು-ದುಮ್ಮಾನಗಳ ಸಂಖ್ಯೆ ಕೂಡ ಜೊತೆ ಜೊತೆಗೇ ಹೆಚ್ಚಾಗುತ್ತದೆ ಎಂದು ಆಧಾರ್ ಅಧಿಕಾರಿಗಳು ಹೇಳುತ್ತಾರೆ. ಆದರೂ ಕೂಡ ಜಿಲ್ಲಾ ಮಟ್ಟದಲ್ಲಿ ದೂರು ದುಮ್ಮಾನಗಳ ಕೋಶಗಳ ಕೊರತೆಯಿಂದಾಗಿ ದೂರದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿರುವವರು ನೂರಾರು ಕಿಲೋ ಮೀಟರ್ ದೂರದಿಂದ ಬೆಂಗಳೂರಿನ ಆಧಾರ್ ಕೇಂದ್ರಕ್ಕೆ ಬರುವ ಅಗತ್ಯವಿದೆ.
ತಮ್ಮ ಸಮಸ್ಯೆ ಬಗ್ಗೆ ಮಾತನಾಡಿದ ತುಮಕೂರಿನ ಗುಬ್ಬಿ ತಾಲ್ಲೂಕಿನ ನಿವಾಸಿ ಮಂಜುನಾಥ್, 2012ರಿಂದ 2 ಬಾರಿ ನಾನು ದಾಖಲು ಮಾಡಿಕೊಂಡಿದ್ದೇನೆ. ಆದರೆ ನನಗೆ ಇನ್ನೂ ಕೂಡ ಆಧಾರ್ ಸಂಖ್ಯೆ ಸಿಕ್ಕಿಲ್ಲ. ಅವರು ಆಧಾರ್ ಕಾರ್ಡಿಗಾಗಿ ಬೆಂಗಳೂರಿಗೆ ಆಗಾಗ ಬಂದು ಹೋಗುತ್ತಿದ್ದಾರೆ.
ಸುಲೈಮಾನ್ ಖಾನ್ ಎಂಬುವವರು ತಮ್ಮ ಆಧಾರ್ ಕಾರ್ಡಿನ ವಿಳಾಸವನ್ನು ನವೀಕರಿಸಲು ಬಯಸುತ್ತಿದ್ದಾರೆ. ಇದಕ್ಕಾಗಿ ಅವರು ಕೋಲಾರದಿಂದ ಬೆಂಗಳೂರಿಗೆ ಬರಬೇಕಾಗಿದೆ. ಹೀಗೆ ನೂರಾರು ಮಂದಿ ಬೆಂಗಳೂರಿನ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆಗಾಗಿ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT