ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಾಹನ ಸಂಚಾರ ಮುಕ್ತ ವಲಯಗಳ ಘೋಷಣೆಗೆ ಹೆಚ್ಚುತ್ತಿರುವ ಬೇಡಿಕೆ

ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ.ರೋಡ್, ಶಿವಾಜಿನಗರ, ಅವೆನ್ಯೂ ರೋಡ್, ಚಿಕ್ಕಪೇಟೆ ಇತ್ಯಾದಿ ಸ್ಥಳಗಳಲ್ಲಿ...

ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ.ರೋಡ್, ಶಿವಾಜಿನಗರ, ಅವೆನ್ಯೂ ರೋಡ್, ಚಿಕ್ಕಪೇಟೆ ಇತ್ಯಾದಿ ಸ್ಥಳಗಳಲ್ಲಿ ನೀವು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವುದು ಅಷ್ಟು ಸುಲಭವಲ್ಲ. ಕಿರು ದಾರಿಯಲ್ಲಿ ನಡೆಯುತ್ತಾ ಹೋಗುತ್ತಿದ್ದರೆ ಹಿಂದು-ಮುಂದು, ಎಡ-ಬಲ ನಾಲ್ಕೂ ಕಡೆಗಳಿಂದ ವಾಹನ ಹಾರ್ನ್ ಮಾಡುತ್ತಿರುತ್ತದೆ. 
ಈ ಪರಿಸ್ಥಿತಿಯ ನಡುವೆ ಬೆಂಗಳೂರು ನಗರದ ಶಾಪಿಂಗ್ ಸ್ಥಳಗಳನ್ನು ಅತ್ಯಂತ ಜನದಟ್ಟಣೆಯ ಜಾಗಗಳನ್ನು ವಾಹನ ಮುಕ್ತವನ್ನಾಗಿಸಬೇಕೆಂಬ ಕೂಗು ಜೋರಾಗುತ್ತಿದೆ.
 ಕಮರ್ಷಿಯಲ್ ಸ್ಟ್ರೀಟ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಚಿಕ್ಕಪೇಟೆ, ಅವೆನ್ಯೂ ರಸ್ತೆ, ಇಂದಿರಾನಗರ, ಕೋರಮಂಗಲ,  ಹೆಚ್ ಎಸ್ಆರ್ ಲೇ ಔಟ್ ಮೊದಲಾದ ಸ್ಥಳಗಳಲ್ಲಿ ಅಲ್ಲಿನ ಸುತ್ತಮುತ್ತಲ ನಿವಾಸಿಗಳು ಮತ್ತು ವ್ಯಾಪಾರ ಒಕ್ಕೂಟಗಳು ಆಸಕ್ತಿ ತೋರಿಸಿ ಕ್ರಮ ಕೈಗೊಂಡರೆ ವಾರಾಂತ್ಯಗಳಲ್ಲಿ ವಾಹನ ಸಂಚಾರ ಮುಕ್ತಗೊಳಿಸಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ಹೇಳುತ್ತಾರೆ.
ಕಬ್ಬನ್ ಪಾರ್ಕನ್ನು ಭಾನುವಾರ ಸಂಚಾರ ಮುಕ್ತಗೊಳಿಸಲಾಗಿದೆ. ಕಮರ್ಷಿಯಲ್ ಸ್ಟ್ರೀಟ್, ಅವೆನ್ಯೂ ರಸ್ತೆ ಮೊದಲಾದವುಗಳನ್ನು ಪಾದಚಾರಿಗಳ ಸುಗಮ ಸಂಚಾರಕ್ಕೆ ವಾರಾಂತ್ಯಗಳಲ್ಲಿ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಸಂಚಾರಿ) ಆರ್. ಹಿತೇಂದ್ರ ತಿಳಿಸಿದ್ದಾರೆ.
ಕಳೆದ ವರ್ಷ, ಬೆಂಗಳೂರು ಸಂಚಾರ ಪೊಲೀಸರು ಮತ್ತು ಕಮರ್ಷಿಯಲ್ ಸ್ಟ್ರೀಟ್ ವ್ಯಾಪಾರಿಗಳ ಒಕ್ಕೂಟ ಕೆಲವು ಗಂಟೆಗಳವರೆಗೆ ವಾರಾಂತ್ಯಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಿತ್ತು. ಆದರೆ ಕೆಲವು ಸಮಯ ಕಳೆದ ನಂತರ ಅದು ಮಹತ್ವವನ್ನು ಕಳೆದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT