ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ಸೇರಿ ದೇಶದ 8 ರಾಜ್ಯಗಳಲ್ಲಿ ಕಾಗದ ರಹಿತ ಆಡಳಿತ

ಕರ್ನಾಟಕ ವಿಧಾನ ಮಂಡಲದಲ್ಲಿ ಶೀಘ್ರವೇ ಕಾಗದ ರಹಿತ ಇ-ಆಡಳಿತ ಜಾರಿಗೆ ಬರಲಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ ಇ-ವಿಧಾನ..

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದಲ್ಲಿ  ಶೀಘ್ರವೇ ಕಾಗದ ರಹಿತ ಇ-ಆಡಳಿತ ಜಾರಿಗೆ ಬರಲಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ ಇ-ವಿಧಾನ ಕುರಿತು ಅಧ್ಯಯನ ಆರಂಭಿಸಿದೆ. ವಿಧಾನ ಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಕಾಗದ ರಹಿತ ಆಡಳಿತ ಜಾರಿಗೆ ತರುವುದು ಇದರ ಉದ್ದೇಶವಾಗಿದೆ. 
ಕೇಂದ್ರ ಸರ್ಕಾರದ ಡಿಜಿಟಲ್ ಯೋಜನೆಯಡಿ ಕರ್ನಾಟಕ ಸೇರಿದಂತೆ ಒಟ್ಟು ದೇಶದ 8 ರಾಜ್ಯಗಳಲ್ಲಿ ಪೇಪರ್ ಲೆಸ್ ಯೋಜನೆ ಜಾರಿಗಾಗಿ ಸಿದ್ಧತೆ ನಡೆಸಲಾಗಿದೆ. ಕರ್ನಾಟಕ ವಿಧಾನ ಮಂಡಲ ಕಾರ್ಯದರ್ಶಿಗಳು ಇದಕ್ಕಾಗಿ 64 ಕೋಟಿ ರೂ, ಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. 
ಒಮ್ಮೆ ಈ ಯೋಜನೆ ಜಾರಿಯಾದರೇ ಪ್ರತಿಯೊಬ್ಬ ಜನಪ್ರತಿನಿಧಿಗಳು ಎಲ್ಲಾ ವ್ಯವಹಾರಗಳನ್ನು ಆನ್ ಲೈನ್ ಮತ್ತು ಇ-ಮೇಲ್ ಮೂಲಕವೇ ಮಾಡಬೇಕಾಗುತ್ತದೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರು ಪೇಪರ್ ಬಳಸುವಂತಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಯೊಂದು ಸಂಪರ್ಕ ಮತ್ತು ಸಂಹವನವನ್ನು ಕಾಗದರಹಿತವಾಗಿ ಮಾಡುವುದೇ ಇದರ ಪ್ರಮುಖ ಉದ್ದೇಶ. ನಿಗಮ ಮತ್ತು ಮಂಡಳಿಗಳು ಕೂಡ ಡಿಜಿಟಲ್ ಮಾದರಿ ಅಳವಡಿಸಲು ತಮ್ಮ ವರದಿಯನ್ನು ರವಾನಿಸಿವೆ.
ಪ್ರತಿ ವರ್ಷ ರಾಜ್ಯ ಸರ್ಕಾರ ಪತ್ರ ವ್ಯವಹಾರಗಳಿಗಾಗಿ ಸುಮಾರು 100 ಕೋಟಿ ರು ಹಣವನ್ನು ವೆಚ್ಚ ಮಾಡುತ್ತಿದೆ ಎಂದು ವಿಧಾನಸಭೆ ಕಾರ್ಯಾಲಯ ಮಾಹಿತಿ ನೀಡಿದೆ. ಸದನಗಳು ಆರಂಭವಾಗುವ ಮುನ್ನ  ಎರಡು ಸದನಗಳ ಎಲ್ಲಾ ಸದಸ್ಯರುಗಳಿಗೆ ಹಾಗೂ ಅಧಿಕಾರಿಗಳಿಗೆ ಮತ್ತು ಮಾಧ್ಯಮದವರಿಗೆ ಯಾವುದೇ ಸೂಚನೆಯಿದ್ದರೂ ಆದನ್ನೂ ಪತ್ರದ ಮೂಲಕವೇ ಮಾಡಲಾಗುತ್ತಿದೆ., ಇದರಿಂದ ಅಧಿಕ ವೆಚ್ಚ ತಗುಲುತ್ತಿದ್ದು, ಡಿಜಿಟಲ್ ವ್ಯವಸ್ಥೆ ಜಾರಿಯಾದರೇ ಹಣ ಉಳಿತಾಯವಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

SCROLL FOR NEXT