ದ್ರಾವಿಡ ಮುನ್ನೇತ್ರ ಕಜ್ಹಗಮ್ (ಡಿಎಂಕೆ) ನಾಯಕ ಎಂ.ಕೆ.ಸ್ಟಾಲಿನ್ 
ರಾಜ್ಯ

ಸ್ಟಾಲಿನ್ ಜಾಣತನದಿಂದ ತಮಿಳುನಾಡಿನಲ್ಲಿ 'ಹಿಂದಿ-ವಿರೋಧಿ' ಆಟ ಆಡುತ್ತಿದ್ದಾರೆ: ಬಿಜೆಪಿ

ದ್ರಾವಿಡ ಮುನ್ನೇತ್ರ ಕಜ್ಹಗಮ್ (ಡಿಎಂಕೆ) ನಾಯಕ ಎಂ.ಕೆ.ಸ್ಟಾಲಿನ್ ಅವರು ತಮಿಳುನಾಡು ರಾಜ್ಯದಲ್ಲಿ ಜಾಣತನದಿಂದ 'ಹಿಂದಿ-ವಿರೋಧಿ' ಆಟವನ್ನು ಆಡುತ್ತಿದ್ದಾರೆಂದು ಬಿಜೆಪಿ ಮಂಗಳವಾರ...

ಬೆಂಗಳೂರು: ದ್ರಾವಿಡ ಮುನ್ನೇತ್ರ ಕಜ್ಹಗಮ್ (ಡಿಎಂಕೆ) ನಾಯಕ ಎಂ.ಕೆ.ಸ್ಟಾಲಿನ್ ಅವರು ತಮಿಳುನಾಡು ರಾಜ್ಯದಲ್ಲಿ ಜಾಣತನದಿಂದ 'ಹಿಂದಿ-ವಿರೋಧಿ' ಆಟವನ್ನು ಆಡುತ್ತಿದ್ದಾರೆಂದು ಬಿಜೆಪಿ ಮಂಗಳವಾರ ಹೇಳಿದೆ. 
ರಾಜ್ಯದ ಜನತೆ ಮೇಲೆ ಕೇಂದ್ರ ಸರ್ಕಾರ ಬಲವಂತದಿಂದ ಹಿಂದಿ ಭಾಷೆಯನ್ನು ಹೇರುತ್ತಿದೆ ಎಂದು ಈ ಹಿಂದೆ ಸ್ಟಾಲಿನ್ ಅವರು ಆರೋಪಿಸಿದ್ದರು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಎಸ್.ಪ್ರಕಾಶ್ ಅವರು, ತಮಿಳುನಾಡು ರಾಜಕೀಯಕ್ಕೆ ಮತ್ತೆ ಹಿಂದಿರುಗಲು ಸ್ಟಾಲಿನ್ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಈ ವಿಚಾರ ಸಂಬಂಧ ವಿವಾದ ಸೃಷ್ಟಿಸಿ, ತಮಿಳುನಾಡು ರಾಜ್ಯ ಜನತೆ ಆಕ್ರೋಶ ವ್ಯಕ್ತಪಡಿಸುವಂತೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ.  
ತಮಿಳುನಾಡು ರಾಜಕೀಯದಲ್ಲಿ ಸ್ಟಾಲಿನ್ ಹಿಂದಿ-ವಿರೋಧಿ ಆಟವನ್ನು ಸ್ಟಾಲಿನ್ ಅತ್ಯಂತ ಜಾಣತನದಿಂದ ಆಡುತ್ತಿದ್ದಾರೆ. ಈ ಮೂಲಕ ಜನರ ವಿಶ್ವಾಸವನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಸಂಸದೀಯ ಸಮಿತಿಯಲ್ಲಿ ನಡೆಸಲಾದ ಚರ್ಚೆಗೆ ಆಧಾರವಾಗಿ ಕೇಂದ್ರ ಸರ್ಕಾರ ಶಿಫಾರಸುಗಳನ್ನು ಮಾಡಿದೆ. 2011ರಲ್ಲೇ ಅಂದಿನ ಸರ್ಕಾರ ಸಮಿತಿಯನ್ನು ನೇಮಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದಾಗ ಸಮಿತಿಯನ್ನು ನೇಮಿಸಿರಲಿಲ್ಲ. ಸಮಿತಿಯ ಶಿಪಾರಸನ್ನು ಮೋದಿ ಸರ್ಕಾರದೊಂದಿಗೆ ಸಂಪರ್ಕಿಸಬಾರದು ಎಂದು ತಿಳಿಸಿದ್ದಾರೆ. 
ಹಿಂದಿ ರಹಿತ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರುವುದಿಲ್ಲಿ ಎಂದು ಕೇಂದ್ರ ಸರ್ಕಾರ ಈ ಹಿಂದೆಯೇ ಸ್ಪಷ್ಟನೆ ನೀಡಿದೆ. ಹಿಂದಿ ಭಾಷೆ ಬರದ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರಬೇಕೆಂಬ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ. ತಮ್ಮ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ಅನಾವಶ್ಯಕವಾಗಿ ವಿವಾದವನ್ನು ಸೃಷ್ಟಿಸಲಾಗುತ್ತಿದೆ. ಮೋದಿ ಸರ್ಕಾರವನ್ನು ಅನಾವಶ್ಯಕವಾಗಿ ವಿವಾದಕ್ಕೆ ಎಳೆಯುತ್ತಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT