ಬೆಂಗಳೂರು: ಮುಂಬರುವ ದಿನಗಳಲ್ಲಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಲ್ಲಿ ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದಿಲ್ಲ ಎಂಬ ಫಲಕ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ ಅದರಂತೆ ಹೋಟೆಲ್ ಗಳಲ್ಲಿ ಯಾವುದೇ ರೀತಿಯ ಸೇವಾ ಶುಲ್ಕ ವಿಧಿಸುವ ಆಗಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರ ಇದೇ 21ರಂದು ಹೊರಡಿಸಿರುವ ಸುತ್ತೋಲೆ ಬಗ್ಗೆ ಗ್ರಾಹಕರು ಮತ್ತು ಹೋಟೆಲ್ ಮಾಲೀಕರಿಗೆ ಅರಿವು ಮೂಡಿಸಲು ತಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.
ರಾಜ್ಯದ ಕೆಲವು ಹೋಟೆಲ್, ರೆಸ್ಟೊರೆಂಟ್ಗಳಲ್ಲಿ ಶೇ6 ರಿಂದ ಶೇ 8 ವರೆಗೆ ಸೇವಾಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಸೇವಾಶುಲ್ಕಕ್ಕೆ ಬೇಡಿಕೆ ಇಟ್ಟರೇ ಅಥವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos