ಯು.ಟಿ ಖಾದರ್ 
ರಾಜ್ಯ

ಹೋಟೆಲ್ ಗಳಲ್ಲಿ ಸೇವಾಶುಲ್ಕ ವಿಧಿಸಿದರೆ ಕಾನೂನು ಕ್ರಮ: ಯು.ಟಿ. ಖಾದರ್ ಎಚ್ಚರಿಕೆ

ಮುಂಬರುವ ದಿನಗಳಲ್ಲಿ ಹೋಟೆಲ್‌ ಮತ್ತು ರೆಸ್ಟೊರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ...

ಬೆಂಗಳೂರು: ಮುಂಬರುವ ದಿನಗಳಲ್ಲಿ ಹೋಟೆಲ್‌ ಮತ್ತು ರೆಸ್ಟೊರೆಂಟ್‌ಗಳಲ್ಲಿ  ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೋಟೆಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದಿಲ್ಲ ಎಂಬ ಫಲಕ ಹಾಕುವುದನ್ನು  ಕಡ್ಡಾಯಗೊಳಿಸಲಾಗಿದೆ ಅದರಂತೆ ಹೋಟೆಲ್ ಗಳಲ್ಲಿ ಯಾವುದೇ ರೀತಿಯ ಸೇವಾ ಶುಲ್ಕ ವಿಧಿಸುವ ಆಗಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರ ಇದೇ 21ರಂದು ಹೊರಡಿಸಿರುವ  ಸುತ್ತೋಲೆ ಬಗ್ಗೆ  ಗ್ರಾಹಕರು ಮತ್ತು ಹೋಟೆಲ್‌ ಮಾಲೀಕರಿಗೆ ಅರಿವು ಮೂಡಿಸಲು ತಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು. 
ರಾಜ್ಯದ ಕೆಲವು ಹೋಟೆಲ್‌, ರೆಸ್ಟೊರೆಂಟ್‌ಗಳಲ್ಲಿ ಶೇ6 ರಿಂದ ಶೇ 8 ವರೆಗೆ ಸೇವಾಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಸೇವಾಶುಲ್ಕಕ್ಕೆ ಬೇಡಿಕೆ ಇಟ್ಟರೇ ಅಥವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT