ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ 
ರಾಜ್ಯ

ಸುಳ್ಳು ಜಾತಿ ಪ್ರಮಾಣ ಪತ್ರ: ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ  ಕಾನೂನು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ...

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ  ಕಾನೂನು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. 

ವಿಧಾನಸೌಧದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕಾಗಿ ಇರುವ ರಾಜ್ಯ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದಿರುವ ಸಂಬಂಧ 482 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ, ದೂರುಗಳು ಬಂದ ಕೂಡಲೇ ವಿಚಾರಣೆ ನಡೆಸಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಮಾಡಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಪರಿಶಿಷ್ಟ ಸಮುದಾಯದವರ ಹೆಸರಿನಲ್ಲಿ ಉದ್ಯೋಗ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕೊನೆಯಾಗಬೇಕು ಎಂದು ಸೂಚಿಸಿದ್ದಾರೆ.
ಪ್ರಮಾಣ ಪತ್ರ ಪಡೆದವರನ್ನು ಮಾತ್ರ ಶಿಕ್ಷಿಸಿದರೆ ಸಾಲದು. ಪರಿಶೀಲಿಸದೆ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನೂ ಶಿಕ್ಷೆಗೆ ಗುರಿಪಡಿಸಿದರೆ ಇದು ನಿಯಂತ್ರಣಕ್ಕೆ ಬರಲಿದೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾತಿ ನಿಂದನೆ ಕೇಸುಗಳು ಹಲವು ಜಿಲ್ಲೆಗಳಲ್ಲಿ ಹೆಚ್ಚಿವೆ. ಈ ಕೇಸುಗಳ ವಿಲೇವಾರಿ ಮಾಡಲು ವಿಶೇಷ ನ್ಯಾಯಾಲಯ ಸ್ಥಾಪಿಸಲು  ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಜತೆ ಚರ್ಚೆ ನಡೆಸುವಂತೆ ಸಭೆಯಲ್ಲಿದ್ದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಹಾಗೂ ಪಡೆಯುವ ಸಂಬಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉಪ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಸಿಎಂ ಆದೇಶಿಸಿದ್ದಾರೆ. ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್‌ ವಿರುದ್ಧ ಸಿದ್ದರಾಮಯ್ಯ ಸಿಟ್ಟಾದ ಘಟನೆ ಸಭೆಯಲ್ಲಿ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT