ಬಳ್ಳಾರಿ ವಿಶ್ವವಿದ್ಯಾಲಯ 
ರಾಜ್ಯ

ರಾಜ್ಯದ ಆರು ವಿವಿಗಳಲ್ಲಿ ಮೂಲ ಸೌಕರ್ಯ ಕೊರತೆ: ಆಯೋಗ

ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ರಾಜ್ಯದ 6 ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯಗಳ...

ಬೆಂಗಳೂರು: ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ರಾಜ್ಯದ 6 ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯಗಳ ಕೊರತೆಯನ್ನು ಹೊಂದಿವೆ ಎಂದು ವಿಶ್ವವಿದ್ಯಾಲಯ ವಿಮರ್ಶಾ ಆಯೋಗ ತಿಳಿಸಿದೆ. ನಿನ್ನೆ ರಾಜ್ಯಪಾಲ ವಜುಭಾಯಿ ವಾಲಾ ಅವರು ನಡೆಸಿದ ಆಯೋಗದ ಸಭೆಯಲ್ಲಿ ಈ ವಿಷಯ ತಿಳಿದುಬಂದಿದೆ.
ದಾವಣಗೆರೆ ವಿ.ವಿ, ಕೃಷ್ಣದೇವರಾಯ ವಿ.ವಿ, ಬಳ್ಳಾರಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಸಂಸ್ಕೃತ ವಿ.ವಿ, ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ ಮತ್ತು ಜನಪದ ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯ ಕೊರತೆ ಎದುರಿಸುತ್ತಿರುವ ವಿಶ್ವವಿದ್ಯಾಲಯಗಳಾಗಿವೆ.
ವಿಮರ್ಶಾ ಆಯೋಗ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಈ ಸಭೆಯನ್ನು ನಡೆಸಲಾಗಿದೆ. ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಈ ವಿಶ್ವವಿದ್ಯಾಲಯಗಳು ಹಲವು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಯತ್ನಿಸಿದೆ ಎಂದು ಆಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
ಈ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಹಾಜರಿದ್ದರು. ಎಲ್ಲಾ ಆರು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳು ವಿಶ್ವವಿದ್ಯಾಲಯಗಳ ಪರಿಸ್ಥಿತಿ ಬಗ್ಗೆ ಕುಲಪತಿಗೆ ವಿವರಿಸಿದ್ದಾರೆ ಎಂದು ಆಯೋಗದ ಸದಸ್ಯರು ಹೇಳಿದ್ದಾರೆ. 
ಆಯೋಗ ಮತ್ತೊಂದು ಸಭೆಯನ್ನು ರಾಜ್ಯಪಾಲರೊಂದಿಗೆ ನಡೆಸಲಿದ್ದು, ಅಲ್ಲಿ ರಾಜ್ಯದ ಎಲ್ಲಾ 25 ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಹಾಜರಿರುತ್ತಾರೆ. ವಿಶ್ವವಿದ್ಯಾಲಯಗಳ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದರು.
ಮೈಸೂರು ವಿಶ್ವವಿದ್ಯಾಲಯ ಮಾತ್ರ ಪರಾಮರ್ಶೆ ನಡೆಸಲು ಬಾಕಿಯಿದೆ. ಹೊಸ ಉಪ ಕುಲಪತಿ ಅಧಿಕಾರ ವಹಿಸಿಕೊಂಡ ನಂತರ ನಾವು ಭೇಟಿ ನೀಡಿ ಪರಿಶೀಲಿಸುತ್ತೇವೆ ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT