ಸಾಂದರ್ಭಿಕ ಚಿತ್ರ 
ರಾಜ್ಯ

ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ನಿಗದಿ: ಇಂದಿನಿಂದಲೇ ಜಾರಿ ಸಾಧ್ಯತೆ

ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 200ಕ್ಕೆ ನಿಗದಿ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ...

ಬೆಂಗಳೂರು: ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 200ಕ್ಕೆ ನಿಗದಿ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿದರು.
ಟಿಕೆಟ್ ದರ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಆದೇಶಕ್ಕೆ ಅಂಕಿತ ಹಾಕಿದ್ದು, ಗುರುವಾರ ಬೆಳಗ್ಗೆ ಆದೇಶದ ಪ್ರಪತಿ ತಮ್ಮ ಕೈ ಸೇರಲಿದ್ದೂ, ತಕ್ಷಣದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. 
ಮಲ್ಟಿಪ್ಲೆಕ್ಸ್‌ನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನವನ್ನು ಕಡ್ಡಾಯಗೊಳಿಸುವ ಆದೇಶವೂ ಅನುಷ್ಠಾನವಾಗಿದೆ. ಮಧ್ಯಾಹ್ನ 1.30, 4.30 ಮತ್ತು ಸಂಜೆ 7.30ರ ಪ್ರೈಮ್‌ ಟೈಮ್‌ನಲ್ಲಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಸಿನಿಮಾಗಳನ್ನು ಪ್ರದರ್ಶಿಸುವುದು ಇನ್ನು ಮುಂದೆ ಕಡ್ಡಾಯವಾಗಲಿದೆ.
ಬಾಹುಬಲಿ ಸೇರಿದಂತೆ ಪ್ರೇಕ್ಷಕರು ಈಗಾಗಲೇ ರು 200ಕ್ಕಿಂತ ಹೆಚ್ಚಿನ ಹಣ ನೀಡಿ ಮುಂಗಡ ಟಿಕೆಟ್‌ ಖರೀದಿಸಿದ್ದರೆ ಚಿತ್ರಮಂದಿರದ ಮಾಲೀಕರಿಂದ ಆ ಹೆಚ್ಚುವರಿ ಹಣವನ್ನು ವಾಪಸ್‌ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ. 
ಈಗಾಗಲೇ ಮುಂಡಗವಾಗಿ ಬುಕ್‌ ಆಗಿರುವ ಟಿಕೆಟ್‌ಗಳಿಗೆ ಪಡೆದುಕೊಂಡಿರುವ ಹೆಚ್ಚುವರಿ ಹಣವನ್ನು ಪ್ರೇಕ್ಷಕರಿಗೆ ಹಿಂತಿರುಗಿಸಬೇಕು. ಇಲ್ಲದಿದ್ದರೆ ಕಾನೂನಾತ್ಮಕ ಕ್ರಮ ಎದುರಿಸಬೇಕಾಗುತ್ತದೆ’ ಎಂದೂ ಗೋವಿಂದು ತಿಳಿಸಿದರು.
ಮಲ್ಟಿಪ್ಲೆಕ್ಸ್‌ಗಳಲ್ಲಿ ಗರಿಷ್ಠ ಮಾರುಕಟ್ಟೆ ಬೆಲೆಗಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ತಿನಿಸು ಮತ್ತು ಪಾನೀಯಗಳನ್ನು ಮಾರಾಟ ಮಾಡುವುದೂ ನಿಲ್ಲಬೇಕು, ಪಾಪ್ ಕಾರ್ನ್ ಮತ್ತಿತ್ತರ ತಿನಿಸುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಮಾರುಕಟ್ಟೆ ದರದ ಮೇಲೆ ಎರಡು ರೂ ಮೂರು ನಿರ್ವಹಣಾ ವೆಚ್ಚ ವಿಧಿಸಲಿ, ಆದರೆ ಅದನ್ನು ಬಿಟ್ಟು 50 ರಿಂದ 100 ರು ಅಧಿಕವಾಗಿ ಗೆ ಮಾರಾಟ ಮಾಡಲಾಗುತ್ತಿದೆ. ಈ ಹಗಲು ದರೋಡೆ ನಿಲ್ಲದಿದ್ದರೇ ಮುಂದಿನ ದಿನಗಳಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT