ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅನಿಲ ಸೋರಿಕೆಯಿಂದ ರಸ್ತೆ ಬದಿಯಲ್ಲಿ ಹೊತ್ತಿಕೊಂಡ ಬೆಂಕಿ

ನಗರದ ಬಂಡೆಪಾಳ್ಯದ ಶಿವನ ದೇವಾಲಯ ರಸ್ತೆಯಲ್ಲಿ ನೆಲದಡಿ ಹಾಕಿದ್ದ ಗ್ಯಾಸ್‌ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದಾಗಿ ..

ಬೆಂಗಳೂರು: ನಗರದ ಬಂಡೆಪಾಳ್ಯದ ಶಿವನ ದೇವಾಲಯ ರಸ್ತೆಯಲ್ಲಿ ನೆಲದಡಿ ಹಾಕಿದ್ದ ಗ್ಯಾಸ್‌ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮುಖ್ಯರಸ್ತೆಯ ಸಿಗ್ನಲ್‌ ಬಳಿ ಕಳೆದ ತಿಂಗಳು ರಸ್ತೆ ಅಗೆದು 6 ಅಡಿ ಕೆಳಭಾಗದಲ್ಲಿ ಗ್ಯಾಸ್‌ ಪೈಪ್‌ಲೈನ್ ಅಳವಡಿಸಲಾಗಿತ್ತು. ಅದೇ ಸ್ಥಳದಲ್ಲಿ ‘ಜಿ.ಜಿ.ಎಲ್‌ ಗ್ಯಾಸ್‌ ಪೈಪ್‌ಲೈನ್‌’ ಎಂಬ ಬರಹವುಳ್ಳ ನಾಮಫಲಕ ನಿಲ್ಲಿಸಿ, ರಸ್ತೆ ಅಗೆಯದಂತೆ ಎಚ್ಚರಿಕೆ ನೀಡಲಾಗಿದೆ.
ನಾಮಫಲಕವಿದ್ದರೂ ಮುಖ್ಯರಸ್ತೆ ಬದಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಕೆಲ ದಿನಗಳಿಂದ ಜಲಮಂಡಳಿಯ ಗುತ್ತಿಗೆದಾರರು ರಸ್ತೆ ಅಗೆಯಲು ಆರಂಭಿಸಿದ್ದರು. ಈ ವೇಳೆ ಗ್ಯಾಸ್‌ ಪೈಪ್‌ಲೈನ್‌ಗೆ ಹಾನಿಯಾಗಿದ್ದು, ಅದರಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ದೂರಿದರು. ನಂತರ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದರು. ಜಲಮಂಡಳಿ ಸಿಬ್ಬಂದಿಯೇ ಸ್ಥಳಕ್ಕೆ ಬಂದು ತಗ್ಗು ಮುಚ್ಚಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT