ಮುತ್ತಣ್ಣ ಮತ್ತು ಕಾವೇರಿ 
ರಾಜ್ಯ

ಕೊಳವೆ ಬಾವಿ ದುರಂತ: ಜಮೀನು ಮಾಲೀಕನ ಬಂಧನ

ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು..

ಬೆಳಗಾವಿ/ಅಥಣಿ: ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು ಬಂಧಿಸಲಾಗಿದೆ.
ಸುಟ್ಟಟ್ಟಿ ಗ್ರಾಮದ ನಿವಾಸಿ ಮುತ್ತಣ್ಣ ಶಂಕರ ಹಿಪ್ಪರಗಿ ಬಂಧಿತ  ವ್ಯಕ್ತಿ. ಅಥಣಿಯ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಯನ್ನು ಮೇ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಝುಂಜರವಾಡದಲ್ಲಿ ತಮಗೆ ಸೇರಿದ್ದ ಹೊಲದಲ್ಲಿ ಮುತ್ತಣ್ಣ ಕೊಳವೆ ಬಾವಿ ಕೊರೆಸಿದ್ದರು. ನೀರು ಬಾರದೇ ವಿಫಲವಾದ ನಂತರ ಬಾವಿಯನ್ನು ತೆರೆದ ಸ್ಥಿತಿಯಲ್ಲಿಯೇ ಬಿಟ್ಟಿದ್ದರು. ಇದರೊಳಗಿದ್ದ ಕೇಸಿಂಗ್‌ ಪೈಪ್‌ ತೆಗೆದು, ಬೇರೊಂದು ಬಾವಿಗೆ ಅಳವಡಿಸಿದ್ದರು. ಕಳೆದ ವಾರ, ಬಾಲಕಿ ಕಾವೇರಿ ಮಾದರ ತೆರೆದ ಕೊಳವೆ ಬಾವಿಯೊಳಗೆ ಬಿದ್ದು, ಮೃತಪಟ್ಟಿದ್ದಳು.
ಘಟನೆಗೆ ಸಂಬಂಧಿಸಿದಂತೆ ಐಗಳಿ ಪೊಲೀಸರು ಜಮೀನಿನ ಮಾಲೀಕ ಮುತ್ತಣ್ಣ ಶಂಕರ ಹಿಪ್ಪರಗಿ ಹಾಗೂ ಅವರ ತಂದೆ ಶಂಕರ ಹಿಪ್ಪರಗಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮತ್ತೊಬ್ಬ ಆರೋಪಿ ಶಂಕರ ಹಿಪ್ಪರಗಿ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT