ಮುತ್ತಣ್ಣ ಮತ್ತು ಕಾವೇರಿ 
ರಾಜ್ಯ

ಕೊಳವೆ ಬಾವಿ ದುರಂತ: ಜಮೀನು ಮಾಲೀಕನ ಬಂಧನ

ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು..

ಬೆಳಗಾವಿ/ಅಥಣಿ: ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು ಬಂಧಿಸಲಾಗಿದೆ.
ಸುಟ್ಟಟ್ಟಿ ಗ್ರಾಮದ ನಿವಾಸಿ ಮುತ್ತಣ್ಣ ಶಂಕರ ಹಿಪ್ಪರಗಿ ಬಂಧಿತ  ವ್ಯಕ್ತಿ. ಅಥಣಿಯ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಯನ್ನು ಮೇ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಝುಂಜರವಾಡದಲ್ಲಿ ತಮಗೆ ಸೇರಿದ್ದ ಹೊಲದಲ್ಲಿ ಮುತ್ತಣ್ಣ ಕೊಳವೆ ಬಾವಿ ಕೊರೆಸಿದ್ದರು. ನೀರು ಬಾರದೇ ವಿಫಲವಾದ ನಂತರ ಬಾವಿಯನ್ನು ತೆರೆದ ಸ್ಥಿತಿಯಲ್ಲಿಯೇ ಬಿಟ್ಟಿದ್ದರು. ಇದರೊಳಗಿದ್ದ ಕೇಸಿಂಗ್‌ ಪೈಪ್‌ ತೆಗೆದು, ಬೇರೊಂದು ಬಾವಿಗೆ ಅಳವಡಿಸಿದ್ದರು. ಕಳೆದ ವಾರ, ಬಾಲಕಿ ಕಾವೇರಿ ಮಾದರ ತೆರೆದ ಕೊಳವೆ ಬಾವಿಯೊಳಗೆ ಬಿದ್ದು, ಮೃತಪಟ್ಟಿದ್ದಳು.
ಘಟನೆಗೆ ಸಂಬಂಧಿಸಿದಂತೆ ಐಗಳಿ ಪೊಲೀಸರು ಜಮೀನಿನ ಮಾಲೀಕ ಮುತ್ತಣ್ಣ ಶಂಕರ ಹಿಪ್ಪರಗಿ ಹಾಗೂ ಅವರ ತಂದೆ ಶಂಕರ ಹಿಪ್ಪರಗಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮತ್ತೊಬ್ಬ ಆರೋಪಿ ಶಂಕರ ಹಿಪ್ಪರಗಿ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!