ಮುತ್ತಣ್ಣ ಮತ್ತು ಕಾವೇರಿ 
ರಾಜ್ಯ

ಕೊಳವೆ ಬಾವಿ ದುರಂತ: ಜಮೀನು ಮಾಲೀಕನ ಬಂಧನ

ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು..

ಬೆಳಗಾವಿ/ಅಥಣಿ: ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಝುಂಜರವಾಡದ ಹೊಲದ ಮಾಲೀಕನನ್ನು ಬಂಧಿಸಲಾಗಿದೆ.
ಸುಟ್ಟಟ್ಟಿ ಗ್ರಾಮದ ನಿವಾಸಿ ಮುತ್ತಣ್ಣ ಶಂಕರ ಹಿಪ್ಪರಗಿ ಬಂಧಿತ  ವ್ಯಕ್ತಿ. ಅಥಣಿಯ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಯನ್ನು ಮೇ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಝುಂಜರವಾಡದಲ್ಲಿ ತಮಗೆ ಸೇರಿದ್ದ ಹೊಲದಲ್ಲಿ ಮುತ್ತಣ್ಣ ಕೊಳವೆ ಬಾವಿ ಕೊರೆಸಿದ್ದರು. ನೀರು ಬಾರದೇ ವಿಫಲವಾದ ನಂತರ ಬಾವಿಯನ್ನು ತೆರೆದ ಸ್ಥಿತಿಯಲ್ಲಿಯೇ ಬಿಟ್ಟಿದ್ದರು. ಇದರೊಳಗಿದ್ದ ಕೇಸಿಂಗ್‌ ಪೈಪ್‌ ತೆಗೆದು, ಬೇರೊಂದು ಬಾವಿಗೆ ಅಳವಡಿಸಿದ್ದರು. ಕಳೆದ ವಾರ, ಬಾಲಕಿ ಕಾವೇರಿ ಮಾದರ ತೆರೆದ ಕೊಳವೆ ಬಾವಿಯೊಳಗೆ ಬಿದ್ದು, ಮೃತಪಟ್ಟಿದ್ದಳು.
ಘಟನೆಗೆ ಸಂಬಂಧಿಸಿದಂತೆ ಐಗಳಿ ಪೊಲೀಸರು ಜಮೀನಿನ ಮಾಲೀಕ ಮುತ್ತಣ್ಣ ಶಂಕರ ಹಿಪ್ಪರಗಿ ಹಾಗೂ ಅವರ ತಂದೆ ಶಂಕರ ಹಿಪ್ಪರಗಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮತ್ತೊಬ್ಬ ಆರೋಪಿ ಶಂಕರ ಹಿಪ್ಪರಗಿ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT