ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ 
ರಾಜ್ಯ

ನಾವು ಭಯೋತ್ಪಾದಕರಾ? ಪ್ರವೇಶ ನಿರಾಕರಿಸಿದ ಸಿಆರ್ ಪಿಎಫ್ ಸಿಬ್ಬಂದಿಗೆ ಡಿ.ಕೆ ಸುರೇಶ್ ಪ್ರಶ್ನೆ

ತೀವ್ರ ಅಸಮಾಧಾನಗೊಂಡ ಸುರೇಶ್ ನಾವು ಭಯೋತ್ಪಾದಕರಾ? ಶಸ್ತ್ರ ಸಜ್ಜಿತ ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡುವ ಅಗತ್ಯವಾದರೂ ಏನಿತ್ತು....

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಸಹೋದರ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರ ಮನೆಗೆ ತೆರಳಲು ಸಿಆರ್ ಪಿಎಫ್ ಸಿಬ್ಬಂದಿ ಅವಕಾಶ ನೀಡಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡ ಸುರೇಶ್ ನಾವು ಭಯೋತ್ಪಾದಕರಾ? ಶಸ್ತ್ರ ಸಜ್ಜಿತ ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡುವ ಅಗತ್ಯವಾದರೂ ಏನಿತ್ತು  ಎಂದು ಪ್ರಶ್ನಿಸಿದ್ದಾರೆ.
ತಮ್ಮ ಸಹೋದರ ಡಿ.ಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ, ಈ ಸಂಬಂಧ ವಿಚಾರಿಸಿಲು ಬಂದಿದ್ದೇನೆ ಎಂದು ಹೇಳಿದರು. 10 ನಿಮಿಷದ ನಂತರ ಐಟಿ ಅಧಿಕಾರಿಗಳು ಒಪ್ಪಿಗೆ ನೀಡಿದ ನಂತರ ಸಿಆರ್ ಪಿಎಫ್ ಸಿಬ್ಬಂದಿ ಸುರೇಶ್ ಅವರನ್ನು ಶಿವಕುಮಾರ್ ಮನೆಗೆ ತೆರಳಲು ಅವಕಾಶ ನೀಡಿದರು.
ಇದೇ ವೇಳೆ ಜೆಡಿಎಸ್ ಬಂಡಾಯ. ಶಾಸಕರಾದ ಜಮೀರ್ ಅಹ್ಮದ್ ಖಾನ್, ಎಚ್ ಸಿ ಬಾಲಕೃಷ್ಣ ಮತ್ತು ಸಂಸದ ಚಲುವರಾಯ ಸ್ವಾಮಿ ಡಿ.ಕೆ ಶಿವಕುಮಾರ್ ಅವರ ನಿವಾಸದ ಬಳಿ ಆಗಮಿಸಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾರತದಲ್ಲಿ ಹಿಟ್ಲರ್  ರೀತಿ ಅಧಿಕಾರ ನಡೆಸುತ್ತಿದ್ದಾರೆ, ಐಟಿ ದಾಳಿ ಸಂಪೂರ್ಣವಾಗಿ ರಾಜಕೀಯ ದುರದ್ದೇಶದಿಂದ ಕೂಡಿದೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT