ಹೇಮಾವತಿ ಜಲಾಶಯ 
ರಾಜ್ಯ

ಹೇಮಾವತಿ ನದಿ ನೀರಿನಿಂದ ಹಾಸನದ ಕೆರೆಗಳು ಭರ್ತಿ!

ಹೇಮಾವತಿ ಜಲಾಶಯದಿಂದ ಆಗಸ್ಟ್ 6 ರಿಂದ 1 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮುಖ್ಯಮಂತ್ರಿ ...

ಬೆಂಗಳೂರು: ಹೇಮಾವತಿ ಜಲಾಶಯದಿಂದ ಆಗಸ್ಟ್ 6 ರಿಂದ 1 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. 
ಪ್ರತಿದಿನ ಉನ್ನತ ಮಟ್ಟದ ಕಾಲುವೆಗಳ ಮೂಲಕ 10 ದಿನಗಳ ಕಾಲ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು, ಇದನ್ನು ಹಾಸನ ಜಿಲ್ಲೆಯ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನದಿಯಿಂದ ನೀರು ಬಿಡಬೇಕು, ಇಲ್ಲದಿದ್ದರೇ ಉಗ್ರ ಕ್ರಮ ಎದುರಿಸಬೇಕಾಗುವುದು ಎಂದು ಹೇಳಿದ್ದರು, ಕೂಡಲೇ ದೇವೇಗೌಡರಿಗೆ ಕರೆ ಮಾಡಿದ ಸಿಎಂ ನೀರು ಬಿಡುವುದಾಗಿ ಭರವಸೆ ನೀಡಿದ್ದರು. 
ಹೇಮಾವತಿ ನದಿಯಿಂದ ಬಿಡುಗಡೆಗೊಂಡ ನೀರು 94 ಕಿಮೀ ಹರಿಯಲಿದ್ದು, ಎಲ್ಲಾ ಕೆರೆಗಳು ಹಾಗೂ ಬಾವಿಗಳು ತುಂಬಲು ಸಹಾಯವಾಗುತ್ತದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಎ. ಮಂಜು ಹೇಳಿದ್ದಾರೆ. ಜೊತೆಗೆ ಕೃಷಿಗಾಗಿ ನೀರು ಬಳಸಿಕೊಳ್ಳದಂತೆ ರೈತರಲ್ಲಿ ಮನವಿ ಮಾಡಿದ್ದಾರೆ.
ಆಗಸ್ಟ್ 14 ರಂದು ಮತ್ತೊಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ, ನಾಲ್ಕು ಜಲಾಶಯಗಳಿಂದ ಮುಂದಿನ ದಿನಗಳಲ್ಲಿ ನೀರು ಹರಿಸುವ ಸಂಬಂಧ ಚರ್ಚೆ ನಡೆಸಲಾಗುವುದು,  ಹವಾಮಾನ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಆಗಸ್ಟ್ 14 ರ ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ತಮಿಳುನಾಡಿಗೆ ಪ್ರತಿದಿನ 7 ರಿಂದ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ, ಒಟ್ಟು 9 ಟಿಎಂಸಿ ನೀರನ್ನು ಇದುವರೆಗೂ ತಮಿಳುನಾಡಿಗೆ ಬಿಡಲಾಗಿದೆ. ಇದೇ ವೇಳೆ 20 ಟಿಎಂಸಿ ನೀರು ಕೊರತೆಯಾಗಿದ್ದು, ಇದೇ ವೇಳೆ ನಾವು ನೀರು ಬಿಡುಗಡೆ ಮಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ನಾಲ್ಕು ಜಲಾಶಯಗಳಿಂದ ಒಟ್ಟು 43 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ, ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಕಡಿಮೆ ಸಂಗ್ರಹವಾಗಿದೆ. ಸಾಮಾನ್ಯ ಮಳೆ ಬಿದ್ದರೇ ನಮಗೆ 9-10 ಟಿಎಂಸಿ ನೀರು ಕೊರತೆಯಾಗುತ್ತದೆ. ನಾಲ್ಕು ಜಲಾಶಯಗಳಿಂದ ಒಟ್ಟು 122 ಟಿಎಂಸಿ ನೀರಿನ ಕೊರತೆಯಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT