ಸಂಗ್ರಹ ಚಿತ್ರ 
ರಾಜ್ಯ

ಭೂಗತ ಪಾತಕಿ ಹತ್ಯೆಗೆ ಸಂಚು ಶಂಕೆ: ಹಿಂಡಲಗಾ ಜೈಲಿನಲ್ಲಿ 400 ಪೊಲೀಸರಿಂದ ತೀವ್ರ ಶೋಧ

ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಸುಮಾರು 400 ಮಂದಿ ಪೊಲೀಸರು ಭಾನುವಾರ ದಿಢೀರ್ ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಬೆಳಗಾವಿ: ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಸುಮಾರು 400 ಮಂದಿ ಪೊಲೀಸರು ಭಾನುವಾರ ದಿಢೀರ್ ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಮೂಲಗಳ ಪ್ರಕಾರ ಕುಖ್ಯಾತ ಭೂಗತ ಪಾತಕಿಯೊಬ್ಬನನ್ನು ಜೈಲಿನಲ್ಲೇ ಕೊಲೆಗೈಯ್ಯಲು ಸಂಚು ನಡೆಸಲಾಗಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಕೈದಿಗಳಿಂದ 2 ಮೊಬೈಲ್ ಹಾಗೂ 4 ಮೊಬಲ್  ಚಾರ್ಜರ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಂತೆಯೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲೂ ಕೂಡ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿಬಂದಿತ್ತು. ಇದಕ್ಕೆ ಇಂಬು ನೀಡುವಂತೆ ಜೈಲಿನಲ್ಲಿ  ಗಾಂಜಾ ಸಾಗಾಟ ಸೇರಿದಂತೆ ಇತರೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಸಹ ಕೈದಿಗಳು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರ್ ಟಿ.ಜಿ.ಕೃಷ್ಣಭಟ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ  ಭಾನುವಾರ ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಕಮೀಷನರ್ ನೇತೃತ್ವದ ತಂಡದಲ್ಲಿ ಡಿಸಿಪಿಗಳಾದ ಸೀಮಾಲಾಟಕರ್, ಅಮರನಾಥರೆಡ್ಡಿ ಸೇರಿದಂತೆ 150ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸ್  ಮೂಲಗಳು ತಿಳಿಸಿವೆ. ಅಂತೆಯೇ ಶ್ವಾನದಳದ ಮೂಲಕ ಜೈಲಿನಾದ್ಯಂತ ತೀವ್ರ ತಪಾಸಣೆ ನಡೆಸಲಾಯಿತು. ಕಳೆದ ಹಲವು ದಿನಗಳ ಹಿಂದೆ ಹಿಂಡಲಗಾ ಜೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ, ಮಾರಕಾಸ್ತ್ರಗಳು ಹಾಗೂ  ಮೊಬೈಲ್‍ ಗಳ ಬಳಕೆಯಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಜೈಲಿಗೆ ಭೇಟಿ ನೀಡಿದೆ.

ಭೂಗತ ಪಾತಕಿ ಬನ್ನಂಜೆ ರಾಜಾ ಹತ್ಯೆಗೆ ನಡೆದಿತ್ತೇ ಸಂಚು!

ಮತ್ತೊಂದು ಮೂಲದ ಪ್ರಕಾರ ಇದೇ ಹಿಂಡಲಗಾ ಜೈಲಿನಲ್ಲೇ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡಜ ಬಂಧಿಯಾಗಿದ್ದು, ಅವನ ಹತ್ಯೆಗಾಗಿಯೇ ಸಂಚು ನಡೆದಿತ್ತೇ ಎಂಬ ಪ್ರಶ್ನೆ ಕೂಡ ಮೂಡತೊಡಗಿದೆ. ಪೊಲೀಸರು  ಹೇಳಿರುವಂತೆ ಭೂಗತ ಪಾತಕಿಯೊಬ್ಬನ ಕೊಲೆಗಾಗಿ ಸಂಚು ನಡೆಸಲಾಗಿದೆ ಎಂದು ತಿಳಿದಿದೆಯಾದರೂ ಆ ಭೂಗತ ಪಾತಕಿ ಯಾರು ಎಂಬುದನ್ನು ಮಾತ್ರ ಪೊಲೀಸರು ಎಲ್ಲಿಯೂ ಹೇಳಿಲ್ಲ. ಇನ್ನು ಜೈಲಿನಲ್ಲಿರುವ ಪ್ರಮುಖ ಭೂಗತ  ಪಾತಕಿ ಎಂದರೆ ಅದು ಅದು ಬನ್ನಂಜೆ ರಾಜಾ ಮಾತ್ರ. ಹೀಗಾಗಿ ಅತನ ವಿರುದ್ಧವೇ ಕೊಲೆ ಸಂಚು ನಡೆದಿರಬಹುದು ಎಂದು ಶಂಕಿಸಲಾಗಿದೆ.

ಈ ಪ್ರಕರಣದ ಬಳಿಕ ಜೈಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT