ಸಂಜೀವ ಶೆಟ್ಟಿ ಮತ್ತು ರತ್ನ ಶೆಟ್ಟಿ 
ರಾಜ್ಯ

ಉಡುಪಿ: ಮತ್ಸ್ಯಗಂಧ ರೈಲಿನಲ್ಲಿ ದಂಪತಿಗೆ ಮತ್ತುಬರಿಸಿ ದರೋಡೆ

ಕಾರ್ಕಳ ಮೂಲದ ವೃದ್ಧ ದಂಪತಿಗೆ ಮತ್ತು ಬರಿಸಿ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಮತ್ಸ್ಯ ಗಂಧ ರೈಲಿನಲ್ಲಿ ...

ಉಡುಪಿ: ಕಾರ್ಕಳ ಮೂಲದ ವೃದ್ಧ ದಂಪತಿಗೆ ಮತ್ತು ಬರಿಸಿ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಮತ್ಸ್ಯ ಗಂಧ ರೈಲಿನಲ್ಲಿ ನಡೆದಿದೆ. 
ಭಾನುವಾರ ಬೆಳಗ್ಗೆ ಮತ್ಸ್ಯಗಂಧ ರೈಲಿನ ಸ್ಲೀಪರ್ ಕೋಚ್ ಸಂಜೀವ ಶೆಟ್ಟಿ ಮತ್ತು ರತ್ನ ಶೆಟ್ಟಿ ಎಂಬುವರನ್ನು ದರೋಡೆ ಮಾಡಲಾಗಿದೆ.
ಆಗಸ್ಟ್ 5ರ ಶನಿವಾರ 3.50ಕ್ಕೆ ಥಾಣೆಯಿಂದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. 
ರೈಲಿನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಸಂಜೀವ ಶೆಟ್ಟಿ ಮತ್ತು ರತ್ನಾ ದಂಪತಿಗೆ ಮತ್ತು ಬರಿಸಿ ಬಳಿಕ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಅದೇ ರೈಲಿನಲ್ಲಿ ಸಂಜೀವ ಶೆಟ್ಟಿ ಅವರ ಸಂಬಂಧಿಕರಾದ ಗಣೇಶ್ ಶೆಟ್ಟಿ ಮತ್ತು ಹರೀಶ್ ಶೆಟ್ಟಿ ಕೂಡ ಬೇರೊಂದು ಕೋಟ್ ಲ್ಲಿದ್ದರು. ಬೆಳಗ್ಗೆ 10.30ಕ್ಕೆ  ರೈಲು ಉಡುಪಿಗೆ ಆಗಮಿಸಿತು, ಈ ವೇಳೆ ದಂಪತಿ ದೀರ್ಘ ನಿದ್ರೆಯಲ್ಲಿದ್ದರು, ಸಂಬಂಧಿಕರು ಎಬ್ಬಿಸಲು ಬಂದಾಗ ಅನುಮಾನ ಗೊಂಡು ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ, ಸುಮಾರು 4 ಲಕ್ಷ ರು. ಮೌಲ್ಯದ ಹಣ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT