ಸಂಜೀವ ಶೆಟ್ಟಿ ಮತ್ತು ರತ್ನ ಶೆಟ್ಟಿ 
ರಾಜ್ಯ

ಉಡುಪಿ: ಮತ್ಸ್ಯಗಂಧ ರೈಲಿನಲ್ಲಿ ದಂಪತಿಗೆ ಮತ್ತುಬರಿಸಿ ದರೋಡೆ

ಕಾರ್ಕಳ ಮೂಲದ ವೃದ್ಧ ದಂಪತಿಗೆ ಮತ್ತು ಬರಿಸಿ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಮತ್ಸ್ಯ ಗಂಧ ರೈಲಿನಲ್ಲಿ ...

ಉಡುಪಿ: ಕಾರ್ಕಳ ಮೂಲದ ವೃದ್ಧ ದಂಪತಿಗೆ ಮತ್ತು ಬರಿಸಿ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಮತ್ಸ್ಯ ಗಂಧ ರೈಲಿನಲ್ಲಿ ನಡೆದಿದೆ. 
ಭಾನುವಾರ ಬೆಳಗ್ಗೆ ಮತ್ಸ್ಯಗಂಧ ರೈಲಿನ ಸ್ಲೀಪರ್ ಕೋಚ್ ಸಂಜೀವ ಶೆಟ್ಟಿ ಮತ್ತು ರತ್ನ ಶೆಟ್ಟಿ ಎಂಬುವರನ್ನು ದರೋಡೆ ಮಾಡಲಾಗಿದೆ.
ಆಗಸ್ಟ್ 5ರ ಶನಿವಾರ 3.50ಕ್ಕೆ ಥಾಣೆಯಿಂದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. 
ರೈಲಿನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಸಂಜೀವ ಶೆಟ್ಟಿ ಮತ್ತು ರತ್ನಾ ದಂಪತಿಗೆ ಮತ್ತು ಬರಿಸಿ ಬಳಿಕ ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಅದೇ ರೈಲಿನಲ್ಲಿ ಸಂಜೀವ ಶೆಟ್ಟಿ ಅವರ ಸಂಬಂಧಿಕರಾದ ಗಣೇಶ್ ಶೆಟ್ಟಿ ಮತ್ತು ಹರೀಶ್ ಶೆಟ್ಟಿ ಕೂಡ ಬೇರೊಂದು ಕೋಟ್ ಲ್ಲಿದ್ದರು. ಬೆಳಗ್ಗೆ 10.30ಕ್ಕೆ  ರೈಲು ಉಡುಪಿಗೆ ಆಗಮಿಸಿತು, ಈ ವೇಳೆ ದಂಪತಿ ದೀರ್ಘ ನಿದ್ರೆಯಲ್ಲಿದ್ದರು, ಸಂಬಂಧಿಕರು ಎಬ್ಬಿಸಲು ಬಂದಾಗ ಅನುಮಾನ ಗೊಂಡು ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ, ಸುಮಾರು 4 ಲಕ್ಷ ರು. ಮೌಲ್ಯದ ಹಣ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT