ಬೆಂಗಳೂರು: ತ್ಯಾಜ್ಯ ಸಮಸ್ಯೆ ಸೇರಿದಂತೆ ಹಲವು ರೀತಿಯ ನಾಗರಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಹೈಕೋರ್ಟ್ ಸಲಹೆ ನೀಡಿದ್ದು, ವಾರ್ಡ್ ಗಳಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಪ್ರದರ್ಶಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ.
ಪ್ರತಿ ವಾರ್ಡ್ ನ ಕಚೇರಿಯಲ್ಲೂ ಸಹ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಹೆಸರಿನೊಂದಿಗೆ ಗುತ್ತಿಗೆದಾರರ ವಿಳಾಸ, ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಹಲವು ನಾಗರಿಕ ಸಂಘಟನೆಗಳು ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಜಯಂತ್ ಪಟೇಲ್ ಹಾಗೂ ನ್ಯಾ.ಎಸ್ ಸುಜಾತ ಅವರಿದ್ದ ವಿಭಾಗೀಯ ಪೀಠ ಬಿಬಿಎಂಪಿಗೆ 2 ವಾರಗಳ ಗಡುವು ನೀಡಿದ್ದು ಮುಂದಿನ ವಿಚಾರಣೆಯಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos