ರಾಜ್ಯಪಾಲ ವಜುಭಾಯಿ ವಾಲಾ 
ರಾಜ್ಯ

ವಿಶ್ವ ವಿದ್ಯಾಲಯದ ಗೋಡೆಗಳನ್ನು ಅಲಂಕರಿಸಲಿರುವ 21 ಹುತಾತ್ಮರ ಭಾವಚಿತ್ರಗಳು

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಗೋಡೆಗಳ ಮೇಲೆ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಹುತಾತ್ಮ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಗೋಡೆಗಳ ಮೇಲೆ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಹುತಾತ್ಮ ಯೋಧರ ಭಾವಚಿತ್ರಗಳನ್ನು ಹಾಕುವ (ವಾಲ್ ಆಫ್ ಹೀರೋಸ್) ಅಭಿಯಾನಕ್ಕೆ ವಿಶ್ವವಿದ್ಯಾಲಯಗಳ ಕುಲಪತಿ ಮತ್ತು ಗವರ್ನರ್ ವಜುಭಾಯಿ ವಾಲಾ ನಿನ್ನೆ ಚಾಲನೆ ನೀಡಿದರು.
ನಿನ್ನೆ ರಾಜಭವನದಲ್ಲಿ ರಕ್ಷಣಾ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಗಳು ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ,  ರಾಜ್ಯಪಾಲರು 21 ಪರಮ ವೀರ ಚಕ್ರ ಪುರಸ್ಕೃತ ಹುತಾತ್ಮ ಸೈನಿಕರ ಭಾವಚಿತ್ರಗಳನ್ನು ಒಳಗೊಂಡ ಸಿಡಿಯನ್ನು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ನೀಡಿದರು.
ವಿದ್ಯಾ ವೀರ್ತ ಅಭಿಯಾನದಡಿ ದೇಶಾದ್ಯಂತ 150 ವಿಶ್ವವಿದ್ಯಾಲಯಗಳಲ್ಲಿ ಇದನ್ನು ಆರಂಭಿಸಲಾಗಿದೆ. ಕರ್ನಾಟಕದ ಪ್ರಮುಖ ಸೈನಿಕರು ಮತ್ತು ಹುತಾತ್ಮರ ಪಟ್ಟಿಯನ್ನು ನೀಡುವಂತೆ ರಾಜ್ಯದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿದೆ.
ವಿದ್ಯಾ ವೀರ್ತ ಅಭಿಯಾನದ ಅಧ್ಯಕ್ಷ ತರುಣ್ ವಿಜಯ್ ಮಾತನಾಡಿ, ಕರ್ನಾಟಕ ರಾಜ್ಯ ಈ ವಿಷಯದಲ್ಲಿ ಮುಂದಾಳತ್ವ ವಹಿಸಲಿ, ಹನುಮಂತಪ್ಪ ಕೊಪ್ಪದ, ಸಂದೀಪ್ ಉನ್ನಿಕೃಷ್ಣನ್ ರಂತಹ ಹೀರೋಗಳ ಭಾವಚಿತ್ರಗಳನ್ನು ವಿಶ್ವವಿದ್ಯಾಲಯದ ಗೋಡೆಗಳಲ್ಲಿ ಹಾಕುವ ಮೂಲಕ ಇಂದಿನ ಯುವ ಜನಾಂಗಕ್ಕೆ ಅವರನ್ನು ಸ್ಪೂರ್ತಿ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ, ಓದಿನಲ್ಲಿ ಶೇಕಡಾ 49 ಅಂಕ ಗಳಿಸಿದ ವಿದ್ಯಾರ್ಥಿ ದೇಶಸೇವೆ ಮಾಡಿದವನು ಶೇಕಡಾ 95 ಅಂಕ ಪಡೆದು ದೇಶದ ಬಗ್ಗೆ ಒಂಚೂರು ಯೋಚಿಸದವನಿಗಿಂತ ಉತ್ತಮ. ದೇಶಕ್ಕಾಗಿ ಕೆಲಸ ಮಾಡಲು ಸಿದ್ದವಿರುವವರು ಭ್ರಷ್ಟರಾಗುವುದಿಲ್ಲ ಎಂದರು.
ಉಪ ಕುಲಪತಿಗಳಿಗೆ ರಾಜ್ಯಪಾಲರ ಕರೆ: ಅಲ್ಲಿದ್ದ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ಮೂರು ಸಲ ಭಾರತ್ ಮಾತಾ ಕಿ ಜೈ ಎಂದು ಹೇಳುವಂತೆ ರಾಜ್ಯಪಾಲರು ಸೂಚಿಸಿದರು. ಅದಕ್ಕೆ ಕೆಲವರು ಮಾತ್ರ ಸಣ್ಣದಾಗಿ ಹೇಳಿದಾಗ, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ನಿಮಗೇ ಸ್ವರವಿಲ್ಲದಿದ್ದರೆ ದೇಶಕ್ಕಾಗಿ ವಿದ್ಯಾರ್ಥಿಗಳು ಧ್ವನಿಯೆತ್ತುವಂತೆ ನೀವು ಹೇಗೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT