ಕಂಟೋನ್ಮೆಂಟ್ ರೈಲು ನಿಲ್ದಾಣ 
ರಾಜ್ಯ

ಮೆಟ್ರೋ ಸ್ಟೇಷನ್ ಬೇಡ ಕೂಗಿಗೆ ಬೆಂಗಳೂರು ಸೆಂಟ್ರಲ್ ಸಂಸದರ ಧ್ವನಿ

ಕಂಟೋನ್ಮೆಂಟ್ ಬಳಿ ಮೆಟ್ರೋ ನಿಲ್ದಾಣ ನಿರ್ಮಿಸುವುದಕ್ಕೆ ಎದುರಾಗಿರುವ ವಿರೋಧದ ಕೂಗಿಗೆ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಧ್ವನಿಗೂಡಿಸಿದ್ದಾರೆ.

ಬೆಂಗಳೂರು: ಕಂಟೋನ್ಮೆಂಟ್ ಬಳಿ ಮೆಟ್ರೋ ನಿಲ್ದಾಣ ನಿರ್ಮಿಸುವುದಕ್ಕೆ ಎದುರಾಗಿರುವ ವಿರೋಧದ ಕೂಗಿಗೆ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಧ್ವನಿಗೂಡಿಸಿದ್ದಾರೆ. 
ಬಂಬೂ ಬಜಾರ್ ಬಳಿ ಮೆಟ್ರೋ ನಿಲ್ದಾಣ ನಿರ್ಮಾಣವಾದರೆ ಬಿಬಿಎಂಪಿ ಆಟದ ಮೈದಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಅಷ್ಟೇ ಅಲ್ಲದೇ ಜನಸಂದಣಿ ಇರುವ, ಕಿರಿದಾದ ರಸ್ತೆಗಳಿರುವ ಪ್ರದೇಶದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾದರೆ ಮತ್ತಷ್ಟು ದಟ್ಟಣೆ ಉಂಟಾಗಲಿದೆ ಎಂದು ಸ್ಥಳೀಯರು ಮೆಟ್ರೋ ನಿಲ್ದಾಣವನ್ನು ವಿರೋಧಿಸುತ್ತಿದ್ದಾರೆ. ಈಗ ಸ್ಥಳೀಯರ ಆಗ್ರಹಕ್ಕೆ ಬೆಂಗಳೂರು ಕೇಂದ್ರದ ಸಂಸದರೂ ಧ್ವನಿಗೂಡಿಸಿದ್ದು, ಈ ವಿಷಯವನ್ನು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ. 
ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದಿರುವ ಸಂಸದ ಪಿಸಿ ಮೋಹನ್, ಬಂಬೂ ಬಜಾರ್ ನಲ್ಲಿ ಮೆಟ್ರೋ ಕಂಟೋನ್ಮೆಂಟ್ ನಿಲ್ದಾಣ ನಿರ್ಮಾಣ ಮಾಡುವುದರಿಂದ ಸಾರ್ವಜನಿಕ ಸಾರಿಗೆಯ ಬಳಕೆಯ ಉದ್ದೇಶಕ್ಕೇ ಧಕ್ಕೆ ಉಂಟಾಗುತ್ತದೆ" ನಗರಾಭಿವೃದ್ಧಿ ತಜ್ಞರು ಹೇಳಿರುವುದನ್ನು ಪುನರುಚ್ಛರಿಸಿರುವ ಪಿಸಿಮೋಹನ್, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮುಂದಿನ ದಿನಗಳಲ್ಲಿ ಮುಖ್ಯ ರೈಲು ನಿಲ್ದಾಣವಾಗಲಿದೆ, ಈ ಹಿನ್ನೆಲೆಯಲ್ಲಿ ಬಂಬೂ ಬಜಾರ್ ಬಳಿ ಕಂಟೋನ್ಮೆಂಟ್ ಮೆಟ್ರೋ ನಿಲ್ದಾಣ ನಿರ್ಮಿಸುವುದು ಸೂಕ್ತವಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT