ವಿಜಯಲಕ್ಷ್ಮೀ 
ರಾಜ್ಯ

ಬೆದರಿಕೆ ಕರೆ: ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಮಹಿಳೆ ಆತ್ಮಹತ್ಯೆಗೆ ಯತ್ನ

ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ..

ಬಾಗಲಕೋಟೆ: ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆ ವಿಜಯಲಕ್ಷ್ಮೀ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ ಮೇಟಿ ಬೆಂಬಲಿಗರಿಂದ ತನಗೆ ನಿರಂತರ ಬೆದರಿಕೆ ಕರೆ ಬರುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ. 
ವಿಜಯಲಕ್ಷ್ಮಿ ಅವರು ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಗೇರಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೋಪಿಯಾನ್‌ ಎನ್‌ಕೌಂಟರ್‌: ಅಡಗಿಕುಳಿತಿದ್ದ LET ಉಗ್ರನ ಹೊಡೆದುರುಳಿಸಿದ ಸೇನಾಪಡೆ..!

ಬಾರೂಯೀಪುರ್ ಅತ್ಯಾಚಾರ ಪ್ರಕರಣ: ಪಾಪದ ಕೃತ್ಯಕ್ಕೆ ತಕ್ಕ ಶಿಕ್ಷೆ: ಅವನ ಮುಖ ನೋಡಲ್ಲ, ಶವ ಕೂಡ ಮನೆಗೆ ತರಲ್ಲ; ಆರೋಪಿ ತಾಯಿ ಮಾತು!

ಯೋಗ್ಯ ವ್ಯಕ್ತಿಗಳು ಪರಿಷತ್ ಗೆ ಬರಬೇಕು- ಚಪಲ ತೀರಿಸಿಕೊಳ್ಳಲು ಬರ್ತಿದ್ದಾರೆ: ಸಿ.ಎನ್‌. ಮಂಜುನಾಥ್ ಕಣಕ್ಕಿಳಿಸುವ ತಂತ್ರ ಹೆಣೆದಿದ್ದೇ ನಾನು!

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

ಬಾರೂಯೀಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಲಿ..!